23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮ

ವೇಣೂರು: ಹಿಂದೂ ಎನ್ನುವುದು ಜಾತಿಯಲ್ಲ, ಅದೊಂದು ಆದರ್ಶ ವ್ಯಕ್ತಿತ್ವ. ದುರ್ಗುಣಗಳನ್ನು ದೂರ ಮಾಡಿ ಸಾತ್ವಿಕನಾಗುವವನೇ ಹಿಂದೂ. ಹಿಂದೂ ಧರ್ಮವು ವ್ಯಕ್ತಿಯನ್ನು ದೈವಿಕ ಶಕ್ತಿಯೊಂದಿಗೆ ಸಂಪರ್ಕಿಸಲು ಸಹಾಯ ಮಾಡುವ ಹಲವು ಆಚರಣೆಗಳನ್ನು ಒಳಗೊಂಡಿದೆ. ಉದಾಹರಣೆಗೆ, ಬೆಳಿಗ್ಗೆ ಕರ ದರ್ಶನ ಮಾಡುವುದು, ಊಟಕ್ಕೆ ಮೊದಲು ಅನ್ನಪೂರ್ಣ ದೇವಿಗೆ ಪ್ರಾರ್ಥಿಸುವುದು, ಮತ್ತು ಸಂಜೆ ತುಳಸಿ ಮಾತೆಗೆ ದೀಪ ಹಚ್ಚುವುದು.

ಧರ್ಮ ಶಿಕ್ಷಣದ ಕೊರತೆಯಿಂದಾಗಿ ಹಿಂದೂ ಸಮಾಜ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅಂಧಾನುಕರಣೆ ಮಾಡುತ್ತಿದ್ದು, ಇದು ಯುವ ಪೀಳಿಗೆಯನ್ನು ದಾರಿತಪ್ಪಿಸುತ್ತಿದೆ.
ಮನುಷ್ಯ ಜನ್ಮದ ಅಂತಿಮ ಗುರಿ ಈಶ್ವರ ಪ್ರಾಪ್ತಿ. ಹಿಂದೂ ಧರ್ಮದ ನಾಲ್ಕು ಪುರುಷಾರ್ಥಗಳಾದ ಧರ್ಮ, ಅರ್ಥ, ಕಾಮ, ಮತ್ತು ಮೋಕ್ಷಗಳಲ್ಲಿ, ಧರ್ಮ ಶಿಕ್ಷಣದ ಕೊರತೆಯಿಂದಾಗಿ ಧರ್ಮ ಮತ್ತು ಮೋಕ್ಷ ಕಣ್ಮರೆಯಾಗುತ್ತಿವೆ. ಇದರಿಂದ ಜನರು ಈಶ್ವರ ಪ್ರಾಪ್ತಿಯ ಗುರಿಯಿಂದ ದೂರವಾಗುತ್ತಿದ್ದಾರೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಮನ್ವಯಕ ಗುರುಪ್ರಸಾದ ಗೌಡ ತಿಳಿಸಿದರು.

ವೇಣೂರಿನ ಗೋಳಿಯಂಗಡಿಯ ದೇವಾಡಿಗರ ಸಮುದಾಯ ಭವನದಲ್ಲಿ ಸ್ಥಳೀಯ ಧರ್ಮಪ್ರೇಮಿಗಳ ಸಹಭಾಗದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮವು ನಿರ್ವಿಘ್ನವಾಗಿ ನೆರವೇರಿತು.

ಈ ಕಾರ್ಯಕ್ರಮದಲ್ಲಿ ವೇಣೂರಿನ ಹರೀಶ ಶೆಟ್ಟಿ, ಸೋಮನಾಥ , ಸಂದೀಪ, ಸೀತಾರಾಮ ಆಚಾರ್ಯ, ಲಕ್ಷ್ಮಣ ಮುಂತಾದ 400ಕ್ಕೂ ಅಧಿಕ ಹಿಂದುತ್ವನಿಷ್ಠರು ಭಾಗಿಯಾಗಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!