23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.12 : ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಿರುದ್ಯೋಗಿ ವಿಕಲಚೇತನರ ಉದ್ಯೋಗ ಪೂರ್ವ ಕೌಶಲ್ಯ ಶಿಬಿರ- ಉದ್ಯೋಗ ಆಯ್ಕೆ

ಬೆಳ್ತಂಗಡಿ: ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ ಮತ್ತು ತಾಲೂಕು ಪಂಚಾಯತ್ ಬೆಳ್ತಂಗಡಿ ಹಾಗೂ MRW, URW, VRW ಇವರುಗಳ ಸಹಯೋಗದೊಂದಿಗೆ ಜಿಲ್ಲೆಯ ಯುವ ನಿರುದ್ಯೋಗಿ ವಿಕಲಚೇತನ ಉದ್ಯೋಗಾಂಕ್ಷಿಗಳಿಗೆ ಸೆ.12 ರಂದು ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ಉದ್ಯೋಗ ಪೂರ್ವ ನೋಂದಾಯಿಸುವ ಪ್ರಕ್ರೀಯೆ ಮತ್ತು ಸ್ವ-ಉದ್ಯೋಗ ಮಾಡಲು ಇಚ್ಚಿಸುವ ವಿಕಲಚೇತನ ಅಭ್ಯರ್ಥಿಗಳ ಆಯ್ಕೆಯ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತಾಲೂಕಿನ ಗ್ರಾಮೀಣ 18 ರಿಂದ 38 ವರ್ಷದೊಳಗಿನ ನಿರುದ್ಯೋಗಿ ವಿಕಲಚೇತನರು ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ಶೈಕ್ಷಣಿಕ ದಾಖಲಾತಿಗಳ ಪ್ರತಿಗಳೊಂದಿಗೆ ಶಿಬಿರದಲ್ಲಿ ಭಾಗವಹಿಸುವುದರೊಂದಿಗೆ, ಸ್ಥಳೀಯ ಉದ್ಯೋಗಾವಕಾಶವನ್ನು ಪಡೆದುಕೊಳ್ಳಬಹುದಾಗಿದೆ.

ವಿಕಲಚೇತನರಿಗೆ ಅಸೋಸಿಯೇಷನ್ ಫಾರ್ ಪೀಪಲ್ ವಿತ್ ಡಿಸೆಬಿಲಿಟಿ (APD) ಸಂಸ್ಥೆಯು ₹10,000 ರಿಂದ ₹50,000 ರವರೆಗೆ ಉದ್ಯಮ ಬೆಂಬಲವನ್ನು ನೀಡಲಿದೆ.
ಅರ್ಹತಾ ಮಾನದಂಡಗಳು: ವಯಸ್ಸು: 18 ರಿಂದ 35 ವರ್ಷ,
ಶಿಕ್ಷಣ: ಕನಿಷ್ಟ ಹತ್ತನೇ ತರಗತಿ ಉತ್ತೀರ್ಣ, APD ಕೊಡುಗೆ: ಗರಿಷ್ಠ ರೂ.50,000, ಇಚ್ಛೆ: ಸ್ವಂತ ಉದ್ಯಮ ಪ್ರಾರಂಭಿಸಲು ನಿಜವಾದ ಆಸಕ್ತಿ ಇರಬೇಕು. ಆಸಕ್ತ ಅಭ್ಯರ್ಥಿಗಳು 12.09.2025ರಂದು ಸ್ಥಳಕ್ಕೆ ಬಂದು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ 9535225693 ಸಂಪರ್ಕಿಸಬಹುದು.

Related posts

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಮೌಲ್ಯ ನಾಯಕ್ ರವರಿಗೆ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya
error: Content is protected !!