25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

ಬೆಳ್ತಂಗಡಿ: ಸೆಪ್ಟೆಂಬರ್ 13ರಂದು ಜೈನ ಧರ್ಮೀಯರ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಶ್ರವಣಬೆಳಗೊಳದ ಜಗದ್ಗುರು ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟಾಚಾರ್ಯವರ್ಯ ಮಹಾಸ್ವಾಮಿಗಳು ,ಶ್ರೀ ಜೈನಮಠ, ಶ್ರವಣಬೆಳಗೊಳ ಇವರು ಬೆಳ್ತಂಗಡಿಯ ಇತಿಹಾಸ ಪ್ರಸಿದ್ಧವಾದ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಇಲ್ಲಿಗೆ ಬೆಳಗ್ಗೆ 9ಗೆ ಪುರ ಪ್ರವೇಶ ಮಾಡಲಿದ್ದಾರೆ. ಇವರನ್ನು ಸಮಾಜ ಬಾಂಧವರು ಭವ್ಯತೆಯಿಂದ ಸ್ವಾಗತಿಸಲಿದ್ದಾರೆ.

ಸದ್ರಿ ದಿನದಂದು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಯಲ್ಲಿ ನಡೆಯಲಿರುವ ಚಂದನ ಷಷ್ಟಿಯ ಉದ್ಯಾಪನೆಯಲ್ಲಿ ದಿವ್ಯ ಪಾವನ ಸಾನಿಧ್ಯ ವಹಿಸಿಕೊಂಡು ಮಾರ್ಗದರ್ಶನ ನೀಡಲಿರುವರು. ಬೆಳ್ತಂಗಡಿ ಬಸದಿಯ ಪ್ರಧಾನ ಅರ್ಚಕರಾದ ಕೆ ಜಯರಾಜ್ ಇಂದ್ರರವರ ತಂಡದವರು ಪೂಜಾ ವಿಧಿ ವಿಧಾನ ನಡೆಸಿಕೊಡಲಿದ್ದಾರೆ.

ಆ ಬಳಿಕ ಮಧ್ಯಾಹ್ನ ವಿಶ್ವಶಾಂತಿ, ವಿಶ್ವದೆಲ್ಲೆಡೆ ನೆಮ್ಮದಿ, ವಿಶ್ವ ಸುಬೀಕ್ಷೆಗಾಗಿ ಅಪರಾಹ್ನ 2 ಗಂಟೆಗೆ ದಿವ್ಯ ಮಂಗಲ ಪ್ರವಚನ ಮಾಡಲಿರುವರು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತೇಸರರಾದ ಕೆ. ಜಯವರ್ಮರಾಜ ಬಳ್ಳಾಲ್ ರವರು ವಹಿಸಿಕೊಳ್ಳಲಿದ್ದಾರೆ. ಈ ಪುಣ್ಯ ಮಹಾಪರ್ವದಲ್ಲಿ ಸರ್ವರೂ ಭಾಗವಹಿಸುವಂತೆ ಧರಣೇಂದ್ರ ಕೆ.ಜೈನ್ ವಿನಂತಿಸಿರುತ್ತಾರೆ.

Related posts

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಸೆ.22ರಿಂದ ಅ.1: ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಮುಹಮ್ಮದ್ ಹುಝೈರ್ ಕುಮಿಟೆಯಲ್ಲಿ ಪ್ರಥಮ

Suddi Udaya

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!