23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

ಬೆಳ್ತಂಗಡಿ: ಸೆಪ್ಟೆಂಬರ್ 13ರಂದು ಜೈನ ಧರ್ಮೀಯರ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಶ್ರವಣಬೆಳಗೊಳದ ಜಗದ್ಗುರು ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟಾಚಾರ್ಯವರ್ಯ ಮಹಾಸ್ವಾಮಿಗಳು ,ಶ್ರೀ ಜೈನಮಠ, ಶ್ರವಣಬೆಳಗೊಳ ಇವರು ಬೆಳ್ತಂಗಡಿಯ ಇತಿಹಾಸ ಪ್ರಸಿದ್ಧವಾದ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಇಲ್ಲಿಗೆ ಬೆಳಗ್ಗೆ 9ಗೆ ಪುರ ಪ್ರವೇಶ ಮಾಡಲಿದ್ದಾರೆ. ಇವರನ್ನು ಸಮಾಜ ಬಾಂಧವರು ಭವ್ಯತೆಯಿಂದ ಸ್ವಾಗತಿಸಲಿದ್ದಾರೆ.

ಸದ್ರಿ ದಿನದಂದು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಯಲ್ಲಿ ನಡೆಯಲಿರುವ ಚಂದನ ಷಷ್ಟಿಯ ಉದ್ಯಾಪನೆಯಲ್ಲಿ ದಿವ್ಯ ಪಾವನ ಸಾನಿಧ್ಯ ವಹಿಸಿಕೊಂಡು ಮಾರ್ಗದರ್ಶನ ನೀಡಲಿರುವರು. ಬೆಳ್ತಂಗಡಿ ಬಸದಿಯ ಪ್ರಧಾನ ಅರ್ಚಕರಾದ ಕೆ ಜಯರಾಜ್ ಇಂದ್ರರವರ ತಂಡದವರು ಪೂಜಾ ವಿಧಿ ವಿಧಾನ ನಡೆಸಿಕೊಡಲಿದ್ದಾರೆ.

ಆ ಬಳಿಕ ಮಧ್ಯಾಹ್ನ ವಿಶ್ವಶಾಂತಿ, ವಿಶ್ವದೆಲ್ಲೆಡೆ ನೆಮ್ಮದಿ, ವಿಶ್ವ ಸುಬೀಕ್ಷೆಗಾಗಿ ಅಪರಾಹ್ನ 2 ಗಂಟೆಗೆ ದಿವ್ಯ ಮಂಗಲ ಪ್ರವಚನ ಮಾಡಲಿರುವರು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತೇಸರರಾದ ಕೆ. ಜಯವರ್ಮರಾಜ ಬಳ್ಳಾಲ್ ರವರು ವಹಿಸಿಕೊಳ್ಳಲಿದ್ದಾರೆ. ಈ ಪುಣ್ಯ ಮಹಾಪರ್ವದಲ್ಲಿ ಸರ್ವರೂ ಭಾಗವಹಿಸುವಂತೆ ಧರಣೇಂದ್ರ ಕೆ.ಜೈನ್ ವಿನಂತಿಸಿರುತ್ತಾರೆ.

Related posts

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಧರ್ಮಸ್ಥಳದ ಮೇಲೆ ಅಪಪ್ರಚಾರವನ್ನು ಸೃಷ್ಟಿಸಿರುವ ಮುಖವಾಡದ ಹಿಂದೆ ಇರುವ ಧಾರ್ಮಿಕ ವಿರೋಧಿ ಶಕ್ತಿಗಳ ವಿರುದ್ಧ ಸಿಬಿಐ ಅಥವಾ ಎನ್.ಐ.ಎ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಗುರಿಪಡಿಸಿ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಪರಿಷತ್ ಅಧ್ಯಕ್ಷ ಡಾ. ಸಂಪತ್ ಕುಮಾರ್ ಆಗ್ರಹ

Suddi Udaya

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya

ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶ- ಉಜಿರೆಯಲ್ಲಿ ಮೊದಲ ಬಾರಿಗೆಯಶಸ್ವಿಯಾಗಿ ನಡೆದ ರೈನಥಾನ್

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಆಟಿ ತಿಂಗೊಲ್ಡ್ ಜೋಕ್ಲೆ ಗೇನ

Suddi Udaya
error: Content is protected !!