23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

ಗುರುವಾಯನಕೆರೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ಮಹಾಸಭೆಯು ಸೆ.12ರಂದು ಸಂಘದ ಜೇಷ್ಠ ಸಭಾಭವನದಲ್ಲಿ ಜರುಗಿತು.

ಸಹಕಾರಿ ಸಂಘವು ಪ್ರಾರಂಭಗೊಂಡು 100ವರ್ಷ ಪೂರೈಸಿದ ಹಿನ್ನಲೆ ಶತಮಾನೋತ್ಸವದ ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷ ನಾರಾಯಣ ರಾವ್ ಎಂ. ಅವರು ಉದ್ಘಾಟಿಸಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 2024-25ರ ಸಾಲಿನಲ್ಲಿ ಒಟ್ಟು 2602 ಸದಸ್ಯರನ್ನು ಹೊಂದಿದ್ದು 2,39,34,710 ಪಾಲು ಬಂಡವಾಳ ಹೊಂದಿದೆ. ಒಟ್ಟು ರೂ. 31,79,31,476 ಠೇವಣಿ ಸಂಗ್ರಹವಾಗಿರುತ್ತದೆ. ರೂ.16,36,91,502 ಸಾಲ ವಿತರಿಸಿ, ರೂ.144ಕೋಟಿ ವ್ಯವಹಾರ ನಡೆಸಿ ರೂ.59,99,798 ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.11 ಡಿವಿಡೆಂಟ್ ನೀಡುವುದಾಗಿ ಘೋಷಿಸಿದರು.

ಸಂಘವು ಶತಮಾನೋತ್ಸವದ ಹೊಸ್ತಿಲಲ್ಲಿ ಇರುವುದರಿಂದ ಸಂಘ ಪ್ರಾರಂಭಿಸಲು ಸಹಕಾರ ನೀಡಿದ ಹಿರಿಯ ಸದಸ್ಯರಿಗೆ ಸನ್ಮಾನಿಸಲಾಯಿತು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಶೇ 75%ಕಿಂತ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಡಿಗ್ರಿ, ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಕಲಾ ಎನ್. ವಾರ್ಷಿಕ ವರದಿ ಮಂಡಿಸಿದರು. ಸಂಘದ ಉಪಾಧ್ಯಕ್ಷ ವಡಿವೇಲು ನಿರ್ದೇಶಕರಾದ ಭಗೀರಥ ಜಿ., ಸುಜಿತಾ ವಿ.ಬಂಗೇರ, ಸಚಿನ್ ಕುಮಾರ್ ನೂಜೋಡಿ, ಅನಂತರಾಜ್ ಜೈನ್, ನಾರಾಯಣ ಪೂಜಾರಿ, ಪುರಂದರ ಶೆಟ್ಟಿ, ಅರುಣ್ ಕುಮಾರ್, ಜಯಂತಿ, ಮೋಹನ್ ನಾಯ್ಕ, ಶಶಿರಾಜ್ ಶೆಟ್ಟಿ, ಡಿ.ಸಿ.ಸಿ. ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿಗಳಾದ ಮಮತಾ, ಚೇತನ ಕೆ., ಭಾಗ್ಯಶ್ರೀ ಡಿ., ಮಧುರಾಜ್ ಎಸ್. ವಿ., ಅಕ್ಷತ್, ಯಶೋಧ ಸಹಕರಿಸಿದರು.

Related posts

ಮುಂಡಾಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಸಪ್ತಾಹ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya
error: Content is protected !!