July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

ಗುರುವಾಯನಕೆರೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ಮಹಾಸಭೆಯು ಸೆ.12ರಂದು ಸಂಘದ ಜೇಷ್ಠ ಸಭಾಭವನದಲ್ಲಿ ಜರುಗಿತು.

ಸಹಕಾರಿ ಸಂಘವು ಪ್ರಾರಂಭಗೊಂಡು 100ವರ್ಷ ಪೂರೈಸಿದ ಹಿನ್ನಲೆ ಶತಮಾನೋತ್ಸವದ ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷ ನಾರಾಯಣ ರಾವ್ ಎಂ. ಅವರು ಉದ್ಘಾಟಿಸಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 2024-25ರ ಸಾಲಿನಲ್ಲಿ ಒಟ್ಟು 2602 ಸದಸ್ಯರನ್ನು ಹೊಂದಿದ್ದು 2,39,34,710 ಪಾಲು ಬಂಡವಾಳ ಹೊಂದಿದೆ. ಒಟ್ಟು ರೂ. 31,79,31,476 ಠೇವಣಿ ಸಂಗ್ರಹವಾಗಿರುತ್ತದೆ. ರೂ.16,36,91,502 ಸಾಲ ವಿತರಿಸಿ, ರೂ.144ಕೋಟಿ ವ್ಯವಹಾರ ನಡೆಸಿ ರೂ.59,99,798 ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.11 ಡಿವಿಡೆಂಟ್ ನೀಡುವುದಾಗಿ ಘೋಷಿಸಿದರು.

ಸಂಘವು ಶತಮಾನೋತ್ಸವದ ಹೊಸ್ತಿಲಲ್ಲಿ ಇರುವುದರಿಂದ ಸಂಘ ಪ್ರಾರಂಭಿಸಲು ಸಹಕಾರ ನೀಡಿದ ಹಿರಿಯ ಸದಸ್ಯರಿಗೆ ಸನ್ಮಾನಿಸಲಾಯಿತು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಶೇ 75%ಕಿಂತ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಡಿಗ್ರಿ, ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಕಲಾ ಎನ್. ವಾರ್ಷಿಕ ವರದಿ ಮಂಡಿಸಿದರು. ಸಂಘದ ಉಪಾಧ್ಯಕ್ಷ ವಡಿವೇಲು ನಿರ್ದೇಶಕರಾದ ಭಗೀರಥ ಜಿ., ಸುಜಿತಾ ವಿ.ಬಂಗೇರ, ಸಚಿನ್ ಕುಮಾರ್ ನೂಜೋಡಿ, ಅನಂತರಾಜ್ ಜೈನ್, ನಾರಾಯಣ ಪೂಜಾರಿ, ಪುರಂದರ ಶೆಟ್ಟಿ, ಅರುಣ್ ಕುಮಾರ್, ಜಯಂತಿ, ಮೋಹನ್ ನಾಯ್ಕ, ಶಶಿರಾಜ್ ಶೆಟ್ಟಿ, ಡಿ.ಸಿ.ಸಿ. ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿಗಳಾದ ಮಮತಾ, ಚೇತನ ಕೆ., ಭಾಗ್ಯಶ್ರೀ ಡಿ., ಮಧುರಾಜ್ ಎಸ್. ವಿ., ಅಕ್ಷತ್, ಯಶೋಧ ಸಹಕರಿಸಿದರು.

Related posts

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ ಹಿನ್ನಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Suddi Udaya
error: Content is protected !!