27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

ಗುರುವಾಯನಕೆರೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ಮಹಾಸಭೆಯು ಸೆ.12ರಂದು ಸಂಘದ ಜೇಷ್ಠ ಸಭಾಭವನದಲ್ಲಿ ಜರುಗಿತು.

ಸಹಕಾರಿ ಸಂಘವು ಪ್ರಾರಂಭಗೊಂಡು 100ವರ್ಷ ಪೂರೈಸಿದ ಹಿನ್ನಲೆ ಶತಮಾನೋತ್ಸವದ ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷ ನಾರಾಯಣ ರಾವ್ ಎಂ. ಅವರು ಉದ್ಘಾಟಿಸಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 2024-25ರ ಸಾಲಿನಲ್ಲಿ ಒಟ್ಟು 2602 ಸದಸ್ಯರನ್ನು ಹೊಂದಿದ್ದು 2,39,34,710 ಪಾಲು ಬಂಡವಾಳ ಹೊಂದಿದೆ. ಒಟ್ಟು ರೂ. 31,79,31,476 ಠೇವಣಿ ಸಂಗ್ರಹವಾಗಿರುತ್ತದೆ. ರೂ.16,36,91,502 ಸಾಲ ವಿತರಿಸಿ, ರೂ.144ಕೋಟಿ ವ್ಯವಹಾರ ನಡೆಸಿ ರೂ.59,99,798 ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.11 ಡಿವಿಡೆಂಟ್ ನೀಡುವುದಾಗಿ ಘೋಷಿಸಿದರು.

ಸಂಘವು ಶತಮಾನೋತ್ಸವದ ಹೊಸ್ತಿಲಲ್ಲಿ ಇರುವುದರಿಂದ ಸಂಘ ಪ್ರಾರಂಭಿಸಲು ಸಹಕಾರ ನೀಡಿದ ಹಿರಿಯ ಸದಸ್ಯರಿಗೆ ಸನ್ಮಾನಿಸಲಾಯಿತು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಶೇ 75%ಕಿಂತ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಡಿಗ್ರಿ, ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಕಲಾ ಎನ್. ವಾರ್ಷಿಕ ವರದಿ ಮಂಡಿಸಿದರು. ಸಂಘದ ಉಪಾಧ್ಯಕ್ಷ ವಡಿವೇಲು ನಿರ್ದೇಶಕರಾದ ಭಗೀರಥ ಜಿ., ಸುಜಿತಾ ವಿ.ಬಂಗೇರ, ಸಚಿನ್ ಕುಮಾರ್ ನೂಜೋಡಿ, ಅನಂತರಾಜ್ ಜೈನ್, ನಾರಾಯಣ ಪೂಜಾರಿ, ಪುರಂದರ ಶೆಟ್ಟಿ, ಅರುಣ್ ಕುಮಾರ್, ಜಯಂತಿ, ಮೋಹನ್ ನಾಯ್ಕ, ಶಶಿರಾಜ್ ಶೆಟ್ಟಿ, ಡಿ.ಸಿ.ಸಿ. ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿಗಳಾದ ಮಮತಾ, ಚೇತನ ಕೆ., ಭಾಗ್ಯಶ್ರೀ ಡಿ., ಮಧುರಾಜ್ ಎಸ್. ವಿ., ಅಕ್ಷತ್, ಯಶೋಧ ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಶ್ರೀ ಗುರುಪೂಜೆ: ಮಾತೃ ಸಂಘದಿಂದ ಮಂಜೂರಾದ 2 ಅಶಕ್ತ ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya
error: Content is protected !!