September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

ಗುರುವಾಯನಕೆರೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ಮಹಾಸಭೆಯು ಸೆ.12ರಂದು ಸಂಘದ ಜೇಷ್ಠ ಸಭಾಭವನದಲ್ಲಿ ಜರುಗಿತು.

ಸಹಕಾರಿ ಸಂಘವು ಪ್ರಾರಂಭಗೊಂಡು 100ವರ್ಷ ಪೂರೈಸಿದ ಹಿನ್ನಲೆ ಶತಮಾನೋತ್ಸವದ ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷ ನಾರಾಯಣ ರಾವ್ ಎಂ. ಅವರು ಉದ್ಘಾಟಿಸಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 2024-25ರ ಸಾಲಿನಲ್ಲಿ ಒಟ್ಟು 2602 ಸದಸ್ಯರನ್ನು ಹೊಂದಿದ್ದು 2,39,34,710 ಪಾಲು ಬಂಡವಾಳ ಹೊಂದಿದೆ. ಒಟ್ಟು ರೂ. 31,79,31,476 ಠೇವಣಿ ಸಂಗ್ರಹವಾಗಿರುತ್ತದೆ. ರೂ.16,36,91,502 ಸಾಲ ವಿತರಿಸಿ, ರೂ.144ಕೋಟಿ ವ್ಯವಹಾರ ನಡೆಸಿ ರೂ.59,99,798 ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.11 ಡಿವಿಡೆಂಟ್ ನೀಡುವುದಾಗಿ ಘೋಷಿಸಿದರು.

ಸಂಘವು ಶತಮಾನೋತ್ಸವದ ಹೊಸ್ತಿಲಲ್ಲಿ ಇರುವುದರಿಂದ ಸಂಘ ಪ್ರಾರಂಭಿಸಲು ಸಹಕಾರ ನೀಡಿದ ಹಿರಿಯ ಸದಸ್ಯರಿಗೆ ಸನ್ಮಾನಿಸಲಾಯಿತು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಶೇ 75%ಕಿಂತ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಡಿಗ್ರಿ, ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಕಲಾ ಎನ್. ವಾರ್ಷಿಕ ವರದಿ ಮಂಡಿಸಿದರು. ಸಂಘದ ಉಪಾಧ್ಯಕ್ಷ ವಡಿವೇಲು ನಿರ್ದೇಶಕರಾದ ಭಗೀರಥ ಜಿ., ಸುಜಿತಾ ವಿ.ಬಂಗೇರ, ಸಚಿನ್ ಕುಮಾರ್ ನೂಜೋಡಿ, ಅನಂತರಾಜ್ ಜೈನ್, ನಾರಾಯಣ ಪೂಜಾರಿ, ಪುರಂದರ ಶೆಟ್ಟಿ, ಅರುಣ್ ಕುಮಾರ್, ಜಯಂತಿ, ಮೋಹನ್ ನಾಯ್ಕ, ಶಶಿರಾಜ್ ಶೆಟ್ಟಿ, ಡಿ.ಸಿ.ಸಿ. ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿಗಳಾದ ಮಮತಾ, ಚೇತನ ಕೆ., ಭಾಗ್ಯಶ್ರೀ ಡಿ., ಮಧುರಾಜ್ ಎಸ್. ವಿ., ಅಕ್ಷತ್, ಯಶೋಧ ಸಹಕರಿಸಿದರು.

Related posts

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya
error: Content is protected !!