22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ವತಿಯಿಂದ ಡ್ರಗ್ಸ್ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮತ್ತು ಪೊಲೀಸ್ ಇಲಾಖೆ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಡ್ರಗ್ಸ್ ತಡೆ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಅವರ ನಾಯಕತ್ವದಲ್ಲಿ, ಪ್ರಶಾಂತ್ ಲಾೖಲ ಅವರ ನಿರ್ದೇಶನದಲ್ಲಿ, ತ್ರಿಶಾ ಅವರ ಸಂಗೀತ ಸಂಯೋಜನೆ, ಸುದೀಪ್ ಸಾಲ್ಯಾನ್ ಅವರ ವಿಡಿಯೋ ಚಿತ್ರೀಕರಣ ಮತ್ತು ಸಂಕಲನ, ರುಡ್‌ಸೆಟ್ ಉಜಿರೆ ಹಾಗೂ ವಾಣಿ ವಿದ್ಯಾಸಂಸ್ಥೆ ಬೆಳ್ತಂಗಡಿ ಅವರ ಸಹಕಾರದೊಂದಿಗೆ ಈ ಕಾರ್ಯಕ್ರಮ ರೂಪುಗೊಂಡಿತು.

ಸುಮಾರು 300ಕ್ಕೂ ಹೆಚ್ಚು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿಯ ಧ್ವಜಾರೋಹಣ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಘಟಕದ ಪೂರ್ವಾಧ್ಯಕ್ಷರು ಚಿದಾನಂದ್ ಇಡ್ಯಾ, ಸ್ವರೂಪ್ ಶೇಖರ್ , ನಾರಾಯಣ ಶೆಟ್ಟಿ, ಉಪಾಧ್ಯಕ್ಷರು ಸುದೀರ್ ಕೆ.ಎನ್., ಮಮಿತಾ ಸುಧೀರ್, ಪ್ರೀತಮ್ ಶೆಟ್ಟಿ, ಕಾರ್ಯದರ್ಶಿ ಪ್ರಮೋದ್ ಕೆ, ಜೆಸಿ ಸಪ್ತಾಹ ನಿರ್ದೇಶಕ ರಕ್ಷಿತ್ ಬಂಗೇರ ಅಂಡಿಂಜೆ, ಮಹಿಳಾ ಜೆಸಿ ಸಂಯೋಜಕಿ ಚಿತ್ರಪ್ರಭ, ಸದಸ್ಯರಾದ ರಾಘವೇಂದ್ರ ಪೂಜಾರಿ ಹಾಗೂ ರಜತ್ ಮೋರ್ತಾಜೆ ಉಪಸ್ಥಿತರಿದ್ದರು. ಸಾರ್ವಜನಿಕರೂ ಸಹಕಾರ ನೀಡಿದರು.

ಕಾರ್ಯಕ್ರಮದ ಜಾಗೃತಿ ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇದು ‘ಜೆಸಿಐ ಬೆಳ್ತಂಗಡಿ’ ಯೂಟ್ಯೂಬ್ ಚಾನಲ್ ನಲ್ಲಿ ಲಭ್ಯವಿದೆ

Related posts

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya
error: Content is protected !!