July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

ವೇಣೂರು : ಸರಕಾರಿ ಪ್ರೌಢಶಾಲೆ ವೇಣೂರು ಕಳೆದ ವರ್ಷ ಹಳೆ ಕಟ್ಟಡದಿಂದ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು ಹಿರಿಯ ವಿದ್ಯಾರ್ಥಿಗಳ ಊರ ಪರ ಊರ ದಾನಿಗಳ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿದೆ. ಶೈಕ್ಷಣಿಕ ಸಾಧನೆಯಲ್ಲಿ ರಾಜ್ಯದಲ್ಲಿಯೇ ಅಗ್ರಸ್ಥಾನದಲ್ಲಿದೆ. ಇದನ್ನು ಮನಗಂಡ ರೋಟರಿ ಕ್ಲಬ್ ಫಲ್ಗುಣಿ ಸಿದ್ದಕಟ್ಟೆ ಇವರು ರೂ50,000 ದೇಣಿಗೆಯನ್ನು ನೀಡಿ ಸಹಕರಿಸಿರುತ್ತಾರೆ.

ರೋಟರಿ ಕ್ಲಬ್ ಇದರ ಅಧ್ಯಕ್ಷ ರೋ. ದುರ್ಗಾ ದಾಸ್ ಶೆಟ್ಟಿ ಚೆಕ್ಕನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಭಾಸ್ಕರ್ ಪೈ ವೇಣೂರು ಹಾಗೂ ಶಾಲಾ ಉಪ ಪ್ರಾಂಶುಪಾಲರಾದ ವೆಂಕಟೇಶ ಎಸ್ ತುಳುಪುಳೆ ಇವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ಲಬ್ ನ ಕೋಶಾಧಿಕಾರಿ ರೋ. ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು. ನೆರವು ಪಡೆಯಲು ಸಹಕರಿಸಿದ ಶಿಕ್ಷಕ ರವೀಂದ್ರ ಕೆ ಇವರನ್ನು ಎಸ್. ಡಿ. ಎಮ್. ಸಿ ಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಅಭಿನಂದಿಸಿದ್ದಾರೆ.

Related posts

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

Suddi Udaya

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya
error: Content is protected !!