September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

ಎಕ್ಸಲೆಂಟ್ ಮೂಡುಬಿದಿರೆ ಚಾಂಪಿಯನ್ ಕ್ರೀಡೆಯಿಂದ ನಾವು ಕಲಿಯುವ ಪಾಠ ಜೀವನದುದ್ದಕ್ಕು ನಮ್ಮ ಕೈ”ಹಿಡಿಯುತ್ತದೆ. ಮನಸ್ಸನ್ನು ಸಮತೋಲನದಲ್ಲಿ ಇಡುವಲ್ಲಿ ಕ್ರೀಡೆಯ ಪಾತ್ರ ದೊಡ್ಡದು ಎಂದು ಎಕ್ಸಲೆಂಟ್ ಮೂಡುಬಿದಿರೆಯ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಶಾಲಾ ಶಿಕ್ಷಣ ಇಲಾಖೆ ಮತ್ತು ಎಕ್ಸಲೆಂಟ್ ಮೂಡುಬಿದಿರೆಯ ಸಹಯೋಗದೊಂದಿಗೆ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ಅಂಡರ್ -೧೯ , ಮೂಡುಬಿದಿರೆ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷರಾಗಿ ನುಡಿದರು.

ವೇದಿಕೆಯಲ್ಲಿ ಮೂಡುಬಿದಿರೆ ತಾಲೂಕು ಕ್ರೀಡಾ ಸಂಯೋಜಕರಾದ ಎಂ. ಹೆಗ್ಡೆ, ಎಕ್ಸಲೆಂಟ್ ಮೂಡುಬಿದಿರೆಯ ದೈಹಿಕ ಶಿಕ್ಷಣ ತರಬೇತುದಾರರಾದ ಎಸ್.ಎಸ್. ಪಾಟೀಲ್ ಉಪಸ್ಥಿತರಿದ್ದರು. ಬಾಲಕರ ಹಾಗೂ ಬಾಲಕಿಯರ “ಭಾಗದ ಟೇಬಲ್ ಟೆನಿಸ್‌ನಲ್ಲಿ ಹಾಗೂ ಬಾಲಕಿಯರ “ಭಾಗದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ “ವಿದ್ಯಾರ್ಥಿಗಳು ಜಯಗಳಿಸಿ ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡರು. ದೈಹಿಕ ಶಿಕ್ಷಣ ತರಬೇತುದಾರ ಲೆಫ್ಟಿನೆಂಟ್ ಮಹೇಂದ್ರ ಕುಮಾರ್ ಜೈನ್ ನಿರೂಪಿಸಿ ಕನ್ನಡ ಉಪನ್ಯಾಸಕ ಡಾ| ವಾದಿರಾಜ ಕಲ್ಲೂರಾಯ ವಂದಿಸಿದರು.

Related posts

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.

Suddi Udaya
error: Content is protected !!