July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಮುಂಡಾಜೆ: ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,439 ಕೋಟಿ ರೂ. ವ್ಯವಹಾರ ನಡೆಸಿದ್ದು 2.39 ಕೋಟಿ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ. 16 ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ” ಎಂದು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ್ ತಿಳಿಸಿದರು.

ಮುಂಡಾಜೆ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಸೆ.13 ರಂದು ಜರಗಿದ ಸಂಘದ 105ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಘವು 6,071 ಮಂದಿ ಸದಸ್ಯರನ್ನು ಹೊಂದಿದ್ದು 7.96 ಕೋಟಿ ರೂ ಪಾಲು ಬಂಡವಾಳ ಹೊಂದಿದೆ. 77. 23 ಕೋಟಿ ರೂ. ಠೇವಣಿ, ಡಿಸಿಸಿ ಬ್ಯಾಂಕ್ ನ ಸಹಕಾರದೊಂದಿಗೆ 114 ಕೋಟಿ ರೂ.ಸಾಲ ನೀಡಿದ್ದು ವರ್ಷಾಂತ್ಯಕ್ಕೆ ಶೇ. 100 ಸಾಲ ವಸೂಲಾತಿಯಾಗಿರುತ್ತದೆ ಎಂದು ಹೇಳಿದರು.

ಸಂಘದ ಅಭಿವೃದ್ಧಿ ದೃಷ್ಟಿಯಿಂದ ರೈತ ಸದಸ್ಯರು ಹಲವಾರು ಚರ್ಚೆಗಳನ್ನು ಮಾಡಿ, ಸೂಕ್ತ ಸಲಹೆ ಸೂಚನೆ ನೀಡಿದರು.

ವೇದಿಕೆಯಲ್ಲಿ ನಿರ್ದೇಶಕರಾದ ವೆಂಕಟೇಶ್ವರ ಭಟ್, ಶಶಿಧರ ಕಲ್ಮಂಜ, ರಾಘವ ಕಲ್ಮಂಜ,ರವಿ ಪೂಜಾರಿ,ಚೆನ್ನಕೇಶವ ನಾಯ್ಕ, ಅಶ್ವಿನಿ ಎ.ಹೆಬ್ಬಾರ್,ಸುಮಾ ಎಂ. ಗೋಖಲೆ,ಮೋಹಿನಿ, ನಾರಾಯಣ ಫಡ್ಕೆ, ಬಾಬು ಗೌಡ ,ಅಜಯ್ ಹಾಗೂ ಸಿಇಒ ಪ್ರಸನ್ನ ಪರಾಂಜಪೆ ಉಪಸ್ಥಿತರಿದ್ದರು.

ಕಕ್ಕಿಂಜೆ ಶಾಖಾ ಪ್ರಬಂಧಕಿ ಪುಷ್ಪಾ ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿ ಹೆಬ್ಬಾರ್ ವಂದಿಸಿದರು.

Related posts

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಮುಗುಳಿ ವಸತಿ ನಿಲಯದ ಬಳಿ ಅಡಿಕೆ ತೋಟದಲ್ಲಿ ಚಿರತೆ ಪತ್ತೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya
error: Content is protected !!