25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

ಎಕ್ಸಲೆಂಟ್ ಮೂಡುಬಿದಿರೆ ಚಾಂಪಿಯನ್ ಕ್ರೀಡೆಯಿಂದ ನಾವು ಕಲಿಯುವ ಪಾಠ ಜೀವನದುದ್ದಕ್ಕು ನಮ್ಮ ಕೈ”ಹಿಡಿಯುತ್ತದೆ. ಮನಸ್ಸನ್ನು ಸಮತೋಲನದಲ್ಲಿ ಇಡುವಲ್ಲಿ ಕ್ರೀಡೆಯ ಪಾತ್ರ ದೊಡ್ಡದು ಎಂದು ಎಕ್ಸಲೆಂಟ್ ಮೂಡುಬಿದಿರೆಯ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಶಾಲಾ ಶಿಕ್ಷಣ ಇಲಾಖೆ ಮತ್ತು ಎಕ್ಸಲೆಂಟ್ ಮೂಡುಬಿದಿರೆಯ ಸಹಯೋಗದೊಂದಿಗೆ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ಅಂಡರ್ -೧೯ , ಮೂಡುಬಿದಿರೆ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷರಾಗಿ ನುಡಿದರು.

ವೇದಿಕೆಯಲ್ಲಿ ಮೂಡುಬಿದಿರೆ ತಾಲೂಕು ಕ್ರೀಡಾ ಸಂಯೋಜಕರಾದ ಎಂ. ಹೆಗ್ಡೆ, ಎಕ್ಸಲೆಂಟ್ ಮೂಡುಬಿದಿರೆಯ ದೈಹಿಕ ಶಿಕ್ಷಣ ತರಬೇತುದಾರರಾದ ಎಸ್.ಎಸ್. ಪಾಟೀಲ್ ಉಪಸ್ಥಿತರಿದ್ದರು. ಬಾಲಕರ ಹಾಗೂ ಬಾಲಕಿಯರ “ಭಾಗದ ಟೇಬಲ್ ಟೆನಿಸ್‌ನಲ್ಲಿ ಹಾಗೂ ಬಾಲಕಿಯರ “ಭಾಗದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ “ವಿದ್ಯಾರ್ಥಿಗಳು ಜಯಗಳಿಸಿ ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡರು. ದೈಹಿಕ ಶಿಕ್ಷಣ ತರಬೇತುದಾರ ಲೆಫ್ಟಿನೆಂಟ್ ಮಹೇಂದ್ರ ಕುಮಾರ್ ಜೈನ್ ನಿರೂಪಿಸಿ ಕನ್ನಡ ಉಪನ್ಯಾಸಕ ಡಾ| ವಾದಿರಾಜ ಕಲ್ಲೂರಾಯ ವಂದಿಸಿದರು.

Related posts

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

Suddi Udaya

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya
error: Content is protected !!