23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

ಎಕ್ಸಲೆಂಟ್ ಮೂಡುಬಿದಿರೆ ಚಾಂಪಿಯನ್ ಕ್ರೀಡೆಯಿಂದ ನಾವು ಕಲಿಯುವ ಪಾಠ ಜೀವನದುದ್ದಕ್ಕು ನಮ್ಮ ಕೈ”ಹಿಡಿಯುತ್ತದೆ. ಮನಸ್ಸನ್ನು ಸಮತೋಲನದಲ್ಲಿ ಇಡುವಲ್ಲಿ ಕ್ರೀಡೆಯ ಪಾತ್ರ ದೊಡ್ಡದು ಎಂದು ಎಕ್ಸಲೆಂಟ್ ಮೂಡುಬಿದಿರೆಯ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಶಾಲಾ ಶಿಕ್ಷಣ ಇಲಾಖೆ ಮತ್ತು ಎಕ್ಸಲೆಂಟ್ ಮೂಡುಬಿದಿರೆಯ ಸಹಯೋಗದೊಂದಿಗೆ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ಅಂಡರ್ -೧೯ , ಮೂಡುಬಿದಿರೆ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷರಾಗಿ ನುಡಿದರು.

ವೇದಿಕೆಯಲ್ಲಿ ಮೂಡುಬಿದಿರೆ ತಾಲೂಕು ಕ್ರೀಡಾ ಸಂಯೋಜಕರಾದ ಎಂ. ಹೆಗ್ಡೆ, ಎಕ್ಸಲೆಂಟ್ ಮೂಡುಬಿದಿರೆಯ ದೈಹಿಕ ಶಿಕ್ಷಣ ತರಬೇತುದಾರರಾದ ಎಸ್.ಎಸ್. ಪಾಟೀಲ್ ಉಪಸ್ಥಿತರಿದ್ದರು. ಬಾಲಕರ ಹಾಗೂ ಬಾಲಕಿಯರ “ಭಾಗದ ಟೇಬಲ್ ಟೆನಿಸ್‌ನಲ್ಲಿ ಹಾಗೂ ಬಾಲಕಿಯರ “ಭಾಗದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ “ವಿದ್ಯಾರ್ಥಿಗಳು ಜಯಗಳಿಸಿ ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡರು. ದೈಹಿಕ ಶಿಕ್ಷಣ ತರಬೇತುದಾರ ಲೆಫ್ಟಿನೆಂಟ್ ಮಹೇಂದ್ರ ಕುಮಾರ್ ಜೈನ್ ನಿರೂಪಿಸಿ ಕನ್ನಡ ಉಪನ್ಯಾಸಕ ಡಾ| ವಾದಿರಾಜ ಕಲ್ಲೂರಾಯ ವಂದಿಸಿದರು.

Related posts

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!