37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ತಾಲೂಕು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲಬೈಲು, ಕಡಿರುದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ 14ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟವು ಕೊಡಿಯಾಲಬೈಲು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಘವೇಂದ್ರ ಪಟವರ್ಧನ್ ಅಧ್ಯಕ್ಷತೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲಬೈಲು, ಕಡಿರುದ್ಯಾವರ ಶಾಲಾ ವಠಾರದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಗೌಡ ಉದ್ಘಾಟಿಸಿ ಶುಭ ಹಾರೈಸಿದರು.


ವೇದಿಕೆಯಲ್ಲಿ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಸುಜಯ, ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೃಷ್ಣಾನಂದ, ಜಿಲ್ಲಾ ಪ್ರಾಥಮಿಕ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ರವಿರಾಜ ಗೌಡ, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಯರಾಜ್ ಜೈನ್, ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಎನ್ಕುಡೆ, ಸೂರಜ್ ವಳಂಬ್ರ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜನಾರ್ಧನ ಕಾನರ್ಪ ನಿರೂಪಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಫಿಲೋಮಿನ ಸಿ.ಜೆ ಸ್ವಾಗತಿಸಿ, ಸಹಶಿಕ್ಷಕಿ ಕುI ಶ್ವೇತಾ ವಿ. ಹೆಚ್. ಧನ್ಯವಾದವಿತ್ತರು.

Related posts

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಭೂಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಎ.ಸಿ.ಪಿ ಹವಾಲ್ದಾರ್ ದೇವಪ್ರಸಾದ್ ಗೌಡ ರವರಿಗೆ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

Suddi Udaya

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya
error: Content is protected !!