ಮುಂಡಾಜೆ: ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,439 ಕೋಟಿ ರೂ. ವ್ಯವಹಾರ ನಡೆಸಿದ್ದು 2.39 ಕೋಟಿ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ. 16 ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ” ಎಂದು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ್ ತಿಳಿಸಿದರು.
ಮುಂಡಾಜೆ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಸೆ.13 ರಂದು ಜರಗಿದ ಸಂಘದ 105ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಘವು 6,071 ಮಂದಿ ಸದಸ್ಯರನ್ನು ಹೊಂದಿದ್ದು 7.96 ಕೋಟಿ ರೂ ಪಾಲು ಬಂಡವಾಳ ಹೊಂದಿದೆ. 77. 23 ಕೋಟಿ ರೂ. ಠೇವಣಿ, ಡಿಸಿಸಿ ಬ್ಯಾಂಕ್ ನ ಸಹಕಾರದೊಂದಿಗೆ 114 ಕೋಟಿ ರೂ.ಸಾಲ ನೀಡಿದ್ದು ವರ್ಷಾಂತ್ಯಕ್ಕೆ ಶೇ. 100 ಸಾಲ ವಸೂಲಾತಿಯಾಗಿರುತ್ತದೆ ಎಂದು ಹೇಳಿದರು.
ಸಂಘದ ಅಭಿವೃದ್ಧಿ ದೃಷ್ಟಿಯಿಂದ ರೈತ ಸದಸ್ಯರು ಹಲವಾರು ಚರ್ಚೆಗಳನ್ನು ಮಾಡಿ, ಸೂಕ್ತ ಸಲಹೆ ಸೂಚನೆ ನೀಡಿದರು.
ವೇದಿಕೆಯಲ್ಲಿ ನಿರ್ದೇಶಕರಾದ ವೆಂಕಟೇಶ್ವರ ಭಟ್, ಶಶಿಧರ ಕಲ್ಮಂಜ, ರಾಘವ ಕಲ್ಮಂಜ,ರವಿ ಪೂಜಾರಿ,ಚೆನ್ನಕೇಶವ ನಾಯ್ಕ, ಅಶ್ವಿನಿ ಎ.ಹೆಬ್ಬಾರ್,ಸುಮಾ ಎಂ. ಗೋಖಲೆ,ಮೋಹಿನಿ, ನಾರಾಯಣ ಫಡ್ಕೆ, ಬಾಬು ಗೌಡ ,ಅಜಯ್ ಹಾಗೂ ಸಿಇಒ ಪ್ರಸನ್ನ ಪರಾಂಜಪೆ ಉಪಸ್ಥಿತರಿದ್ದರು.
ಕಕ್ಕಿಂಜೆ ಶಾಖಾ ಪ್ರಬಂಧಕಿ ಪುಷ್ಪಾ ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿ ಹೆಬ್ಬಾರ್ ವಂದಿಸಿದರು.











