22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಮುಂಡಾಜೆ: ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,439 ಕೋಟಿ ರೂ. ವ್ಯವಹಾರ ನಡೆಸಿದ್ದು 2.39 ಕೋಟಿ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ. 16 ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ” ಎಂದು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ್ ತಿಳಿಸಿದರು.

ಮುಂಡಾಜೆ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಸೆ.13 ರಂದು ಜರಗಿದ ಸಂಘದ 105ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಘವು 6,071 ಮಂದಿ ಸದಸ್ಯರನ್ನು ಹೊಂದಿದ್ದು 7.96 ಕೋಟಿ ರೂ ಪಾಲು ಬಂಡವಾಳ ಹೊಂದಿದೆ. 77. 23 ಕೋಟಿ ರೂ. ಠೇವಣಿ, ಡಿಸಿಸಿ ಬ್ಯಾಂಕ್ ನ ಸಹಕಾರದೊಂದಿಗೆ 114 ಕೋಟಿ ರೂ.ಸಾಲ ನೀಡಿದ್ದು ವರ್ಷಾಂತ್ಯಕ್ಕೆ ಶೇ. 100 ಸಾಲ ವಸೂಲಾತಿಯಾಗಿರುತ್ತದೆ ಎಂದು ಹೇಳಿದರು.

ಸಂಘದ ಅಭಿವೃದ್ಧಿ ದೃಷ್ಟಿಯಿಂದ ರೈತ ಸದಸ್ಯರು ಹಲವಾರು ಚರ್ಚೆಗಳನ್ನು ಮಾಡಿ, ಸೂಕ್ತ ಸಲಹೆ ಸೂಚನೆ ನೀಡಿದರು.

ವೇದಿಕೆಯಲ್ಲಿ ನಿರ್ದೇಶಕರಾದ ವೆಂಕಟೇಶ್ವರ ಭಟ್, ಶಶಿಧರ ಕಲ್ಮಂಜ, ರಾಘವ ಕಲ್ಮಂಜ,ರವಿ ಪೂಜಾರಿ,ಚೆನ್ನಕೇಶವ ನಾಯ್ಕ, ಅಶ್ವಿನಿ ಎ.ಹೆಬ್ಬಾರ್,ಸುಮಾ ಎಂ. ಗೋಖಲೆ,ಮೋಹಿನಿ, ನಾರಾಯಣ ಫಡ್ಕೆ, ಬಾಬು ಗೌಡ ,ಅಜಯ್ ಹಾಗೂ ಸಿಇಒ ಪ್ರಸನ್ನ ಪರಾಂಜಪೆ ಉಪಸ್ಥಿತರಿದ್ದರು.

ಕಕ್ಕಿಂಜೆ ಶಾಖಾ ಪ್ರಬಂಧಕಿ ಪುಷ್ಪಾ ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿ ಹೆಬ್ಬಾರ್ ವಂದಿಸಿದರು.

Related posts

ನಾಳ ಕ್ಷೇತ್ರಗಳಲ್ಲಿ ರೆಂಜೆಗಿಡದ ವೃಕ್ಷಾರೋಪಣ ಕಾರ್ಯಕ್ರಮ

Suddi Udaya

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!