ಅರಸಿನಮಕ್ಕಿ : ಇಲ್ಲಿನ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.13ರಂದು ಅರಸಿನಮಕ್ಕಿಯಲ್ಲಿ ನಡೆಯಿತು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಭವ್ಯ ರವರು 2024-25ನೇ ಸಾಲಿನ ವಾರ್ಷಿಕ ವರದಿ ಮತ್ತು ಮುಂದಿನ ವರ್ಷದ ಅಂದಾಜು ಬಜೆಟ್ ಅನ್ನು ಮಂಡಿಸಿದರು.
ಮಹಾಸಭೆಯಲ್ಲಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಶ್ರೀಕರ ಭಿಡೆ, ಮಾಜಿ ಅಧ್ಯಕ್ಷ ಕಾನ ಸುಬ್ರಾಯ ಭಟ್ ರವರನ್ನು ಸನ್ಮಾನಿಸಲಾಯಿತು. ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಜೇತ್ ಶೆಟ್ಟಿಗೆ ನಗದು ಪುರಸ್ಕಾರ ನೀಡಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ಬಿ. ಶಿವಾನಂದ ಮಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಗಣೇಶ್ ಹೊಸ್ತೋಟ, ನಿರ್ದೇಶಕರುಗಳಾದ ಕೃಷ್ಣಪ್ಪ ಗೌಡ, ದಯಾನಂದ ಯು., ಕೆ. ರಘುರಾಜ ಹೆಬ್ಬಾರ್, ಜಯಂತಿ ಶೆಟ್ಟಿ, ಬೇಬಿ ರಾಣ್ಯ, ವೆಂಕಪ್ಪ ಶೆಟ್ಟಿಗಾರ್, ಸಿಬ್ಬಂದಿಗಳಾದ ಶಕುಂತಲಾ, ಜಯಶ್ರೀ ಉಪಸ್ಥಿತರಿದ್ದರು.
ನಿರ್ದೇಶಕರಾದ ಬಿ. ಗಿರೀಶ್ ಭಟ್ ಸ್ವಾಗತಿಸಿದರು.











