September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಅರಸಿನಮಕ್ಕಿ : ಇಲ್ಲಿನ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.13ರಂದು ಅರಸಿನಮಕ್ಕಿಯಲ್ಲಿ ನಡೆಯಿತು.


ಮುಖ್ಯಕಾರ್ಯನಿರ್ವಹಣಾಧಿಕಾರಿ ಭವ್ಯ ರವರು 2024-25ನೇ ಸಾಲಿನ ವಾರ್ಷಿಕ ವರದಿ ಮತ್ತು ಮುಂದಿನ ವರ್ಷದ ಅಂದಾಜು ಬಜೆಟ್ ಅನ್ನು ಮಂಡಿಸಿದರು.


ಮಹಾಸಭೆಯಲ್ಲಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಶ್ರೀಕರ ಭಿಡೆ, ಮಾಜಿ ಅಧ್ಯಕ್ಷ ಕಾನ ಸುಬ್ರಾಯ ಭಟ್ ರವರನ್ನು ಸನ್ಮಾನಿಸಲಾಯಿತು. ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಜೇತ್ ಶೆಟ್ಟಿಗೆ ನಗದು ಪುರಸ್ಕಾರ ನೀಡಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ಬಿ. ಶಿವಾನಂದ ಮಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಗಣೇಶ್ ಹೊಸ್ತೋಟ, ನಿರ್ದೇಶಕರುಗಳಾದ ಕೃಷ್ಣಪ್ಪ ಗೌಡ, ದಯಾನಂದ ಯು., ಕೆ. ರಘುರಾಜ ಹೆಬ್ಬಾರ್, ಜಯಂತಿ ಶೆಟ್ಟಿ, ಬೇಬಿ ರಾಣ್ಯ, ವೆಂಕಪ್ಪ ಶೆಟ್ಟಿಗಾರ್, ಸಿಬ್ಬಂದಿಗಳಾದ ಶಕುಂತಲಾ, ಜಯಶ್ರೀ ಉಪಸ್ಥಿತರಿದ್ದರು.
ನಿರ್ದೇಶಕರಾದ ಬಿ. ಗಿರೀಶ್ ಭಟ್ ಸ್ವಾಗತಿಸಿದರು.

Related posts

ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya

ಉಜಿರೆ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಕಾರ್ಯಾಲಯ ಉದ್ಘಾಟನೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya
error: Content is protected !!