July 23, 2026
ರಾಜಕೀಯ

ಕಾರ್ಮಿಕ ಘಟಕದ ದ.ಕ ಮತ್ತು ಉಡುಪಿ ಜಿಲ್ಲೆಯ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು ನೇಮಕ

ಬೆಳ್ತಂಗಡಿ: ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಅಬ್ದುಲ್ ರಹಿಮಾನ್ ಪಡ್ಪು ರವರನ್ನು ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮತ್ತು ಕೆ.ಪಿ ಸಿ.ಸಿ.ಕಾರ್ಯಾಧ್ಯಕ್ಷರಾದ ಜೆ.ಇ.ಚಂದ್ರಶೇಖರ್ ರವರ ಆದೇಶದಂತೆ,ರಾಜ್ಯ ಪದಾಧಿಕಾರಿಗಳ ಕಾರ್ಯಕಾರಿಣಿ ಸಭೆಯ ನಿರ್ಣಯದಂತೆ ಕಾರ್ಮಿಕ ಘಟಕದ ದ.ಕ ಮತ್ತು ಉಡುಪಿ ಜಿಲ್ಲೆಯ ಉಸ್ತುವಾರಿಯಾಗಿ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಕೆ ಪುಟ್ಟಸ್ವಾಮಿಗೌಡ ನೇಮಕಗೊಳಿಸಿರುತ್ತಾರೆ.

ಮುಂದಿನ ದಿನಗಳಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಕಾರ್ಮಿಕ ಘಟಕದ ಬ್ಲಾಕ್ ಪದಾಧಿಕಾರಿಗಳನ್ನು, ಬೂತ್ ಮಟ್ಟದ ಸಮಿತಿಯನ್ನು ,ಘಟಕದ ಎಲ್ಲಾ ವಿಭಾಗದ ಸಮಿತಿಯನ್ನು ರಚಿಸಿ ಪಕ್ಷ ಸಂಘಟನೆಗೆ ಒತ್ತು ನೀಡಬೇಕೆಂದು ಮತ್ತು ರಾಜ್ಯ ಸಮಾವೇಶ ನಡೆಸಲು ಅನುವಾಗುವಂತೆ ಕಾರ್ಯನಿರ್ವಹಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

ಹಾಗೂ ಪಕ್ಷದ ದ.ಕ. ಮತ್ತು ಉಡಪಿ ಜಿಲ್ಲೆಯ ಅಧ್ಯಕ್ಷರು,ಮಾಜಿ ಶಾಸಕರು,ಪರಾಜಿತ ಅಭ್ಯರ್ಥಿಗಳು,ಜಿಲ್ಲಾ ಮಟ್ಟ ಮತ್ತು ಬ್ಲಾಕ್ ಮಟ್ಟದ ಮುಂಚೂಣಿ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಭೇಟಿ ಮಾಡಿ ಪಕ್ಷ ಸಂಘಟನೆ ಹಾಗೂ ಕಾರ್ಮಿಕ ಘಟಕದ ಬೆಳವಣಿಗೆಗೆ ಶ್ರಮಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

ಅಬ್ದುಲ್ ರಹಿಮಾನ್ ಪಡ್ಪು ರವರು ಈ ಹಿಂದಿನಿಂದಲೂ ಜಿಲ್ಲಾ ಮತ್ತು ರಾಜ್ಯಮಟ್ಟದ ಪಕ್ಷದ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು.ಮತ್ತು ಮಡಂತ್ಯಾರು ಸೌಹಾರ್ಧ ಫ್ರೆಂಡ್ಸ್ ಇದರ ಸ್ಥಾಪಕ ಅಧ್ಯಕ್ಷರಾಗಿ,ಮಡಂತ್ಯಾರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾಗಿ,ಮಡಂತ್ಯಾರು ಸಿ.ಎ. ಬ್ಯಾಂಕಿನ ಮಾಜಿ ನಿರ್ದೇಶಕರಾಗಿ ಪ್ರಸ್ತುತ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಉಪಾದ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ .

Related posts

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

Suddi Udaya

ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya
error: Content is protected !!