23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

ಗೇರುಕಟ್ಟೆ : ಗೇರುಕಟ್ಟೆ ಸ್ನೇಹ ಸಂಗಮ ಆಟೋ ಚಾಲಕ, ಮಾಲಕ ಸಂಘದ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಪೂಜೆ ನಡೆಯಿತು.

ಇತ್ತೀಚೆಗೆ ಪರಪ್ಪು-ಕೊಯ್ಯೂರು ಟಾರು ರಸ್ತೆಯಲ್ಲಿ ನಾಗರಹಾವು ವಾಹನದಡಿಗೆ ಬಿದ್ದು ಸಾವನ್ನಪ್ಪಿತು. ಇದನ್ನು ಗಮನಿಸಿದ ಗೇರುಕಟ್ಟೆ ಸ್ನೇಹ ಸಂಗಮ ಆಟೋ,ಚಾಲಕ, ಮಾಲಕರ ಸಂಘದ ಸದಸ್ಯರು ಹಾಗೂ ಸಾರ್ವಜನಿಕರನ್ನು ಸೇರಿಸಿ ಕೊಂಡು ಸರ್ಪ ಸಂಸ್ಕಾರವನ್ನು ಮಾಡುವುದಾಗಿ ಸಮಾಲೋಚನೆ ನಡೆಸಿ ಈ ತೀರ್ಮಾನಕ್ಕೆ ಬಂದರು. ಅದರಂತೆ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವೃತ್ತ ದಾರಿಯಾಗಿ ಚಾಲಕ ವಿನಯ ಗೌಡ ನೇತೃತ್ವದಲ್ಲಿ ಸೆ.12 ರಂದು ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಕೆ., ಮಾಜಿ ಅಧ್ಯಕ್ಷ ವಸಂತ ಶೆಟ್ಟಿ, ಚಾಲಕರಾದ ಗಣೇಶ್ ಕೆ.,ಓಬಯ್ಯ ಗೌಡ ,ತಾರನಾಥ ಬಿ.,ಶೇಖರ ಗೌಡ ಎಮ್.,ರಮೇಶ್‌ ಪೂಜಾರಿ,ಸಂದೀಪ್ ಪಿ.,ಕೀರ್ತಿ,ರೊನಾಲ್ಡೊ ಪಿಂಟೋ ಮತ್ತು ದಿಕ್ಷೀತ್ ಗೌಡ ಉಪಸ್ಥಿತರಿದ್ದರು.

Related posts

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya
error: Content is protected !!