23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ.111 ಕೋಟಿ ವ್ಯವಹಾರ, ರೂ.24 ಲಕ್ಷ ಲಾಭ,

ಬೆಳ್ತಂಗಡಿ: ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ಬಿ. ಅಬ್ದುಲ್ ರಝಾಕ್ ಅಧ್ಯಕ್ಷತೆಯಲ್ಲಿ ಸೆ.13 ರಂದು ತೆಕ್ಕಾರು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಅಧ್ಯಕ್ಷ ಬಿ. ಅಬ್ದುಲ್ ರಝಾಕ್ ಮಾತನಾಡಿ ಪ್ರಸಕ್ತ ವರ್ಷದಲ್ಲಿ 111 ಕೋಟಿ ರೂ. ವ್ಯವಹಾರ ನಡೆಸಿ ಶೇ.100ರಷ್ಟು ಸಾಲ ವಸೂಲಾತಿ ನಡೆಸಿ 24 ಲಕ್ಷ ಲಾಭ ಗಳಿಸಿದ್ದು ಲೆಕ್ಕ ಪರಿಶೋಧನೆಯಲ್ಲಿ ಎ. ಗ್ರೇಡ್ ಪಡೆದಿದೆ. ಸಂಘಕ್ಕೆ ಸತತ ಐದನೇ ಬಾರಿ ಜಿಲ್ಲಾ ಬ್ಯಾಂಕಿನಿಂದ ಸಾಲ ವಸೂಲಾತಿಗೆ ಪ್ರಶಸ್ತಿ ಬಂದಿದೆ ಎಂದು ತಿಳಿಸಿದರು.

ಸಂಘದ ಉಪಾಧ್ಯಕ್ಷ ಶೇಖರ್ ಪೂಜಾರಿ, ನಿರ್ದೇಶಕರಾದ ಅಬ್ದುಲ್ ರಹಿಮಾನ್, ಅಬ್ದುಲ್ ಮುನೀರ್, ಎಸ್.ಬಿ.ಇಬ್ರಾಹಿಂ, ಕೃಷ್ಣಪ್ಪ ಮೂಲ್ಯ, ರವಿ, ವಸಂತಿ, ರಾಜೇಶ್ವರಿ ರಮೇಶ್, ಜೀನತ್ , ಜಿಲ್ಲಾ ಬ್ಯಾಂಕಿನ ಪ್ರತಿನಿಧಿ ಸಿರಾಜುದ್ದೀನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪ ಉಪಸ್ಥಿತರಿದ್ದರು.

ಸನ್ಮಾನ: ಅಡಿಕೆ ಮರಗಳಿಗೆ ಶಿಲೀಂದ್ರ ದ್ರಾವಣ ಸಿಂಪಡಿಸುವ ಕಾರ್ಮಿಕರಾದ ಅಬ್ದುಲ್ ಹಮೀದ್ ಕುಡೋಲು, ತನಿಯಪ್ಪ ನಾಯ್ಕ್ ಬಾಜಾರು, ಅಬ್ದುಲ್ ಆರಿಸ್ ಬೈಲಮೇಲು, ಆದಂ ಬೊಮ್ಮಕೋಡಿ, ಬಾಬು ಶೇಖರ ಬಸವನಕೆರೆ, ಜಯಾನಂದ ಪೂಜಾರಿ ಆನಲ್ಕೆ, ಖಾಲಿದ್ ಬಿತ್ತುಪಾದೆ, ರವಿ ಕುಟ್ಟಿಕ್ಕಳ, ರಾಮಚಂದ್ರ ಬಾಜಾರು, ಜನಾರ್ದನ ನಾಯ್ಕ್, ಜಯಂತ ಪುರ್ಕಜೆ, ಮೊಹಮ್ಮದ್ ಮರಮ, ಅಬೂಬಕ್ಕರು ಮರಮ, ಜಯಾನಂದ ಕುಲಾಲ್ ಇಂತ್ರಿಬೆಟ್ಟು, ಖಾಸಿಂ ಬಾಗ್ಲೋಡಿ ಹಾಗೂ ಇಬ್ರಾಹಿಂ ಬೈಲಮೇಲು ಅವರನ್ನು ಸನ್ಮಾನಿಸಲಾಯಿತು. ನಾಟಿ ವೈದ್ಯರಾದ ನೀಲಮ್ಮ ಕಜೆಕೋಡಿ ಮತ್ತು ಅವ್ವಮ್ಮ ಕೋಡಿಬೆಟ್ಟು , ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಹಾಗೂ ಲೋಕೇಶ್ ಕೆ.ಮುರುಗೋಳಿ, ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಫಲಿತಾಂಶ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ, ಸನ್ಮಾನಿಸಲಾಯಿತು. ಮೃತಪಟ್ಟ ಸದಸ್ಯರಿಗೆ ಸಾಂತ್ವನ ನಿಧಿ ನೀಡಲಾಯಿತು.

ಸಿಬ್ಬಂದಿ ಪ್ರೇಮಾ ಯನ್‌. ಪ್ರಾರ್ಥಿಸಿದರು. ನಿರ್ದೇಶಕರಾದ ಇನಾಸ್ ರೋಡ್ರಿಗಸ್ ಸ್ವಾಗತಿಸಿ, ಸತೀಶ್ ಪೂಜಾರಿ ನಿರೂಪಿಸಿದರು. ಸಿಬ್ಬಂದಿಗಳಾದ ನಮಿತಾ, ನವೀಶ, ಸಾಹಿದಾ ಬಾನು, ಉಸ್ಮಾನ್ ಸಹಕರಿಸಿದರು.

Related posts

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya
error: Content is protected !!