23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮ ಸಮೃದ್ಧಿ ಸ್ಥಿತಿ ಸ್ಥಾಪಕತ್ವ ಯೋಜನೆ ತರಬೇತಿ

ಬೆಳ್ತಂಗಡಿ: ಸಂಜೀವಿನಿ – ಎನ್.ಆರ್.ಎಲ್.ಎಮ್ ತಾಲೂಕು ಅಭಿಯಾನ ನಿರ್ವಹಣಾ ಘಟಕ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ(ಎಲ್.ಸಿ.ಆರ್.ಪಿ), ಕೃಷಿಸಖಿ ಮತ್ತು ಪಶುಸಖಿಯವರಿಗೆ 2025-26ನೇ ಸಾಲಿನ ಗ್ರಾಮ ಸಮೃದ್ಧಿ ಸ್ಥಿತಿ ಸ್ಥಾಪಕತ್ವ ಯೋಜನೆ (ವಿ.ಪಿ.ಆರ್.ಪಿ)ಯ ಮೊದಲ ಹಂತದ ಒಂದು ದಿನದ ತರಬೇತಿ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೆ. 08 ರಿಂದ 11 ರವರೆಗೆ ನಡೆಯಿತು.

ದ.ಕ. ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೋ.ಇ ಜಯರಾಮ್ ಉಪಸ್ಥಿತರಿದ್ದು ಗ್ರಾಮ ಸಮೃದ್ಧಿ ಸ್ಥಿತಿ ಸ್ಥಾಪಕತ್ವ ಯೋಜನೆ (ವಿ.ಪಿ.ಆರ್.ಪಿ) ದತ್ತಾಂಶ ದಾಖಲೀಕರಣದ ಕುರಿತು ಮಾರ್ಗದರ್ಶನ ಮಾಡಿದರು.

ಬೆಳ್ತಂಗಡಿ ಸಂಜೀವಿನಿ ತಾಲೂಕು ಅಭಿಯಾನ ನಿರ್ವಹಣಾ ಘಟಕದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀಮತಿ ಪ್ರತಿಮಾ ಇವರು ವಿ.ಪಿ.ಆರ್.ಪಿ ಯೋಜನೆ ಅನುಷ್ಠಾನ ಕುರಿತಂತೆ ಹಾಗೂ ಬಿ.ಆರ್.ಪಿ (ಪಿ.ಆರ್.ಐ) ಶ್ರೀಮತಿ ಶ್ರೀಕಲಾ ವಿ.ಪಿ.ಆರ್.ಪಿ ಕಾನ್ಸೆಪ್ಟ್ ಸೀಡಿಂಗ್ ಮಾಹಿತಿ ನೀಡಿದರು. ಟಿ.ಎಮ್.ಐ.ಎಸ್ ಶ್ರೀ ವಿನೋದ್ ಪ್ರಸಾದ್ ಕಲ್ಲಾಜೆ ಗ್ರಾಮ ಸಮೃದ್ಧಿ ಸ್ಥಿತಿ ಸ್ಥಾಪಕತ್ವ ಯೋಜನೆ (ವಿ.ಪಿ.ಆರ್.ಪಿ) ತಂತ್ರಾಂಶದಲ್ಲಿ ಮಾಹಿತಿ ದಾಖಲೀಕರಣ ಕುರಿತು ತರಬೇತಿ ನೀಡಿದರು.

ಬೆಳ್ತಂಗಡಿ ತಾಲೂಕಿನ 48 ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಿಂದ 96 ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು, 48 ಕೃಷಿಸಖಿ, 48 ಪಶುಸಖಿಯರು ಒಟ್ಟು 192 ಸಿ.ಆರ್.ಪಿ ಗಳು 48 ಜನರ ನಾಲ್ಕು ತಂಡವಾಗಿ ತಲಾ 01 ದಿನದಂತೆ 04 ದಿನಗಳಲ್ಲಿ ತರಬೇತಿಯಲ್ಲಿ ಭಾಗವಹಿಸಿದರು.

ತರಬೇತಿಯ 04 ದಿನಗಳಲ್ಲೂ ಉಜಿರೆಯ ಸಂಜೀವಿನಿ ಅಕ್ಕ ಕೆಫೆಯಿಂದ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಮಾಡಲಾಯಿತು.

ಬೆಳ್ತಂಗಡಿ ಸಂಜೀವಿನಿ ತಾಲೂಕು ಅಭಿಯಾನ ನಿರ್ವಹಣಾ ಘಟಕದ ತಾಲೂಕು ಕೃಷಿಯೇತರ ವ್ಯವಸ್ಥಾಪಕರು ನಿತೀಶ್, ತಾಲೂಕು ಕೃಷಿ ವ್ಯವಸ್ಥಾಪಕರು ಬಂಗಾರಪ್ಪ, ವಲಯ ಮೇಲ್ವಿಚಾರರಾದ ಜಯಾನಂದ್, ಸ್ವಸ್ತಿಕ್, ಶ್ರೀಮತಿ ವೀಣಾಶ್ರೀ ಕೆ.ಕೆ, ತರಬೇತಿಯ ಯಶಸ್ಸಿಗೆ ಸಹಕರಿಸಿದರು.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ನಾವೂರು: ಕಿರ್ನಡ್ಕ ನಲಿಕೆ ಸಮುದಾಯದ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜರಿಂದ ಗಂಗಾ ಕಲ್ಯಾಣ ಯೋಜನೆಯ ಬೋರುವೇಲ್ ಅನುಷ್ಠಾನ: ಗೌರವಾರ್ಪಣೆ

Suddi Udaya
error: Content is protected !!