23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಮುಂಡಾಜೆ: ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,439 ಕೋಟಿ ರೂ. ವ್ಯವಹಾರ ನಡೆಸಿದ್ದು 2.39 ಕೋಟಿ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ. 16 ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ” ಎಂದು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ್ ತಿಳಿಸಿದರು.

ಮುಂಡಾಜೆ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಸೆ.13 ರಂದು ಜರಗಿದ ಸಂಘದ 105ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಘವು 6,071 ಮಂದಿ ಸದಸ್ಯರನ್ನು ಹೊಂದಿದ್ದು 7.96 ಕೋಟಿ ರೂ ಪಾಲು ಬಂಡವಾಳ ಹೊಂದಿದೆ. 77. 23 ಕೋಟಿ ರೂ. ಠೇವಣಿ, ಡಿಸಿಸಿ ಬ್ಯಾಂಕ್ ನ ಸಹಕಾರದೊಂದಿಗೆ 114 ಕೋಟಿ ರೂ.ಸಾಲ ನೀಡಿದ್ದು ವರ್ಷಾಂತ್ಯಕ್ಕೆ ಶೇ. 100 ಸಾಲ ವಸೂಲಾತಿಯಾಗಿರುತ್ತದೆ ಎಂದು ಹೇಳಿದರು.

ಸಂಘದ ಅಭಿವೃದ್ಧಿ ದೃಷ್ಟಿಯಿಂದ ರೈತ ಸದಸ್ಯರು ಹಲವಾರು ಚರ್ಚೆಗಳನ್ನು ಮಾಡಿ, ಸೂಕ್ತ ಸಲಹೆ ಸೂಚನೆ ನೀಡಿದರು.

ವೇದಿಕೆಯಲ್ಲಿ ನಿರ್ದೇಶಕರಾದ ವೆಂಕಟೇಶ್ವರ ಭಟ್, ಶಶಿಧರ ಕಲ್ಮಂಜ, ರಾಘವ ಕಲ್ಮಂಜ,ರವಿ ಪೂಜಾರಿ,ಚೆನ್ನಕೇಶವ ನಾಯ್ಕ, ಅಶ್ವಿನಿ ಎ.ಹೆಬ್ಬಾರ್,ಸುಮಾ ಎಂ. ಗೋಖಲೆ,ಮೋಹಿನಿ, ನಾರಾಯಣ ಫಡ್ಕೆ, ಬಾಬು ಗೌಡ ,ಅಜಯ್ ಹಾಗೂ ಸಿಇಒ ಪ್ರಸನ್ನ ಪರಾಂಜಪೆ ಉಪಸ್ಥಿತರಿದ್ದರು.

ಕಕ್ಕಿಂಜೆ ಶಾಖಾ ಪ್ರಬಂಧಕಿ ಪುಷ್ಪಾ ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿ ಹೆಬ್ಬಾರ್ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

Suddi Udaya

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya
error: Content is protected !!