September 6, 2026
ಪ್ರಮುಖ ಸುದ್ದಿವರದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

ನಾರಾವಿ: ಸದಸ್ಯರ ಆರ್ಥಿಕ ಅವಶ್ಯಕತೆಗಳನ್ನು ಪೂರೈಸಲು ಸಂಘವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು ವರ್ಷಾಂತ್ಯದಲ್ಲಿ ಸಂಘವು ರೂ. 28.76 ಕೋಟಿ ಠೇವಣಿ ಹೊಂದಿರುತ್ತದೆ. ವರದಿ ಸಾಲಿನಲ್ಲಿ ರೂ. 272.37 ಕೋಟಿ ಒಟ್ಟು ವ್ಯವಹಾರ ಮಾಡಲಾಗಿದೆ. ನಮ್ಮ 5 ಗ್ರಾಮಗಳ ಸಹೃದಯಿ ಸದಸ್ಯ ಗ್ರಾಹಕರು ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿಸಿರುವುದರಿಂದ 2024-25ನೇ ಸಾಲಿನಲ್ಲಿ ಸಂಘವು ರೂ 0.89 ಲಕ್ಷ ಲಾಭ ಗಳಿಸಲು ಸಹಕಾರಿಯಾಯಿತು.ಸದಸ್ಯರಿಗೆ ಶೇ.12 ನೀಡಲಾಗುವುದು ಎಂದು ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಹೇಳಿದರು.

ಅವರು ಸೆ. 14ರಂದು ನಾರಾವಿ ಧರ್ಮಶ್ರೀ ಸಭಾಭವನದಲ್ಲಿ ನಡೆದ ನಾರಾವಿ ಸಿಎ ಬ್ಯಾಂಕಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಂಘವು ಅಡಿಟ್ ವರ್ಗೀಕರಣದಲ್ಲಿ ಎ ತರಗತಿ ಪಡೆದುಕೊಂಡಿರುತ್ತದೆ. ಅದೇ ರೀತಿ ವರದಿ ಸಾಲಿನಲ್ಲಿ ದ.ಕ. ಜಿಲ್ಲಾ ಕೇಂದ್ರ ಬ್ಯಾಂಕಿನಿಂದ 100% ಸಾಲ ವಸೂಲಾತಿಗಾಗಿ ಸಾಧನಾ ಪ್ರಶಸ್ತಿಯನ್ನು ಸಂಘವು ಪಡಕೊಂಡಿರುತ್ತದೆ ಎಂದರು.ರೈತ ಸದಸ್ಯರು ಸಂಘದ ಅಭಿವೃದ್ಧಿ ಹಾಗೂ ಅನುಕೂಲಗಳ ಬಗ್ಗೆ ಚರ್ಚಿಸಿದರು.

ವೇದಿಕೆಯಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್,ನಾರಾವಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಜಗದೀಶ್ ಹೆಗ್ಡೆ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್ ಶಶಿಕಾಂತ್ ಜೈನ್,ನಿರ್ದೇಶಕರಾದ ಸದಾನಂದ ಗೌಡ,ವಿಠಲ ಪೂಜಾರಿ,ರಾಜೇಂದ್ರ ಕುಮಾರ್,ಕೃಷ್ಣಪ್ಪ ಪೂಜಾರಿ,ಉಮೇಶ್ ಎಂ.ಕೆ,ಶೇಖರ,ಶ್ರೀಮತಿ ಯಶೋಧ,ಶ್ರೀಮತಿ ಸುಜಲತಾ,ಶ್ರೀಮತಿ ಪದ್ಮಶ್ರೀ,ಶ್ರೀಮತಿ ಸುಪ್ರಿಯಾ ಉಪಸ್ಥಿತರಿದ್ದರು.ಸಿಬ್ಬಂದಿಗಳಾದ ಶ್ರೀಮತಿ ವನಿತಾ,ಶೇಖರ ಕೆ,ಶ್ರೀಮತಿ ಮಲ್ಲಿಕಾ,ಶ್ರೇಯಾಂಸ ಕುಮಾರ್,ಅಶೋಕ,ಪೂಜಿತ್ ಎನ್,ಶ್ರೀಮತಿ ರೇಷ್ಮಾ ಜಿ ಹಾಗೂ ಸದಸ್ಯರು ಸಹಕರಿಸಿದರು.

Related posts

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿಗೆ ತಾ.ಪಂ ಇಓ ಭೇಟಿ, ಸ್ಥಳ ಪರಿಶೀಲನೆ

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

Suddi Udaya
error: Content is protected !!