22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

ಬೆಳ್ತಂಗಡಿ: ಉಜಿರೆಯ NABH ಪುರಸ್ಕೃತ ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್ ಐ ಸಿ ಯು ಸೌಲಭ್ಯವುಳ್ಳ ನವೀನ ಅಂಬ್ಯುಲನ್ಸನ್ನು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಮತ್ತು ಡಾ. ಭಾರತಿ ದಂಪತಿಗಳು ಗಣಪತಿ ವಿಗ್ರಹಕ್ಕೆ ಪುಷ್ಪ ಮಾಲೆಯನ್ನು ಅರ್ಪಿಸುವ ಮೂಲಕ ಲೋಕಾರ್ಪಣೆ ಮಾಡಿದರು. ಇದು ಸಂಪೂರ್ಣ ಹವಾನಿಯಂತ್ರಿತವಾಗಿದ್ದು ವೆಂಟಿಲೇಟರ್ ಸಹಿತ ಐ ಸಿ ಯು ನಲ್ಲಿರುವ ಎಲ್ಲ ಸೌಲಭ್ಯಗಳನ್ನು ಹೊಂದಿರುತ್ತದೆ. ಮತ್ತು ವಿಶೇಷವಾಗಿ ಹವಾನಿಯಂತ್ರಿತ ಶೈತ್ಯಾಗಾರವಿದ್ದು ಉಜಿರೆಯಿಂದ ದೂರದ ಕಾಶ್ಮೀರದವರೆಗೂ ಶವವನ್ನು (ಕೆಡದಂತೆ) ಸಾಗಿಸಲು ಸಹಕಾರಿಯಾಗಲಿದೆ ಎಂದು ಡಾ.ಗೋಪಾಲಕೃಷ್ಣ ಮಾಹಿತಿ ನೀಡಿದರು. ಆಸ್ಪತ್ರೆಯು ಪ್ರಾರಂಭವಾಗಿ 25ನೇ ವರ್ಷದಲ್ಲಿ ಇಂಥ ಹೈಟೆಕ್‌ ವ್ಯವಸ್ಥೆಯ ಅಂಬ್ಯುಲನ್ಸನ್ನು ಈ ಪರಿಸರಕ್ಕೆ ಕೊಡುಗೆಯಾಗಿ ನೀಡಲು ಹೆಮ್ಮೆಯಾಗುತ್ತಿದೆ ಎಂದು ಡಾ.ಗೋಪಾಲಕೃಷ್ಣ ದಂಪತಿಗಳು ಅನಿಸಿಕೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರುಗಳಾದ ಡಾ.ಆದಿತ್ಯ ರಾವ್, ಡಾ. ಅಂಕಿತ ಜಿ ಭಟ್, ಡಾ. ಪ್ರದ್ಯೋತ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸಿ.ಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya
error: Content is protected !!