September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

ಬೆಳ್ತಂಗಡಿ: ಉಜಿರೆಯ NABH ಪುರಸ್ಕೃತ ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್ ಐ ಸಿ ಯು ಸೌಲಭ್ಯವುಳ್ಳ ನವೀನ ಅಂಬ್ಯುಲನ್ಸನ್ನು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಮತ್ತು ಡಾ. ಭಾರತಿ ದಂಪತಿಗಳು ಗಣಪತಿ ವಿಗ್ರಹಕ್ಕೆ ಪುಷ್ಪ ಮಾಲೆಯನ್ನು ಅರ್ಪಿಸುವ ಮೂಲಕ ಲೋಕಾರ್ಪಣೆ ಮಾಡಿದರು. ಇದು ಸಂಪೂರ್ಣ ಹವಾನಿಯಂತ್ರಿತವಾಗಿದ್ದು ವೆಂಟಿಲೇಟರ್ ಸಹಿತ ಐ ಸಿ ಯು ನಲ್ಲಿರುವ ಎಲ್ಲ ಸೌಲಭ್ಯಗಳನ್ನು ಹೊಂದಿರುತ್ತದೆ. ಮತ್ತು ವಿಶೇಷವಾಗಿ ಹವಾನಿಯಂತ್ರಿತ ಶೈತ್ಯಾಗಾರವಿದ್ದು ಉಜಿರೆಯಿಂದ ದೂರದ ಕಾಶ್ಮೀರದವರೆಗೂ ಶವವನ್ನು (ಕೆಡದಂತೆ) ಸಾಗಿಸಲು ಸಹಕಾರಿಯಾಗಲಿದೆ ಎಂದು ಡಾ.ಗೋಪಾಲಕೃಷ್ಣ ಮಾಹಿತಿ ನೀಡಿದರು. ಆಸ್ಪತ್ರೆಯು ಪ್ರಾರಂಭವಾಗಿ 25ನೇ ವರ್ಷದಲ್ಲಿ ಇಂಥ ಹೈಟೆಕ್‌ ವ್ಯವಸ್ಥೆಯ ಅಂಬ್ಯುಲನ್ಸನ್ನು ಈ ಪರಿಸರಕ್ಕೆ ಕೊಡುಗೆಯಾಗಿ ನೀಡಲು ಹೆಮ್ಮೆಯಾಗುತ್ತಿದೆ ಎಂದು ಡಾ.ಗೋಪಾಲಕೃಷ್ಣ ದಂಪತಿಗಳು ಅನಿಸಿಕೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರುಗಳಾದ ಡಾ.ಆದಿತ್ಯ ರಾವ್, ಡಾ. ಅಂಕಿತ ಜಿ ಭಟ್, ಡಾ. ಪ್ರದ್ಯೋತ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ವೃದ್ಧೆಯ ಚಿನ್ನದ ಬಳೆ ಎಳೆದೊಯ್ದ ದುಷ್ಕರ್ಮಿ

Suddi Udaya

ನಡ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿ

Suddi Udaya
error: Content is protected !!