July 23, 2026
ಗ್ರಾಮಾಂತರ ಸುದ್ದಿ

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

ಮಾಲಾಡಿ : ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿಯನ್ನು ಸೆ. 14 ರಂದು ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ನಾನು ಓರ್ವ ಜನಪ್ರತಿನಿಧಿಯಾಗಿ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಮಾಲಾಡಿ ಶಕ್ತಿ ಕೇಂದ್ರ ಮತ್ತು ಸಮಸ್ತ ನಾಗರಿಕರ ಪರವಾಗಿ ಶಾಸಕರನ್ನು ಅಭಿನಂದಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,ಮಡoತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಜೋಯಲ್ ಮೆಂಡೋನ್ಸ, ಮಹಿಳಾ ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್, ಮಾಲಾಡಿ, ಸೋಣಂದೂರು ಶಕ್ತಿಕೇಂದ್ರ ಅಧ್ಯಕ್ಷರುಗಳಾದ ರಾಜೇಶ್ ಕೋಡ್ಯಲು, ದಿನೇಶ್ ಕರ್ಕೇರ, ಪಂಚಾಯತ್ ಸದಸ್ಯೆ ಶ್ರೀಮತಿ ಜಯಂತಿ ನಾಯಕ್,ಆಟೋ ಮಾಲಕ- ಚಾಲಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು,ಮಾಜಿ ಪಂಚಾಯತ್ ಸದಸ್ಯರುಗಳು,ಮಡoತ್ಯಾರು ಸಿ ಎ ಬ್ಯಾಂಕ್ ಮತ್ತು ಹಾಲು ಉತ್ಪಾದಕರ ಸಂಘದ ನಿರ್ದೇಶಕರುಗಳು, ಬೂತ್ ಅಧ್ಯಕ್ಷರುಗಳು ಕಾರ್ಯದರ್ಶಿಗಳು,ಪಕ್ಷದ ಅನ್ಯನ್ಯ ಜವಾಬ್ದಾರಿ ಇರುವ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ನಾಗರಿಕ ಬಂಧುಗಳು ಉಪಸ್ಥಿತರಿದ್ದರು.

Related posts

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

Suddi Udaya
error: Content is protected !!