30.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಇತಿಹಾಸದಲ್ಲಿಯೇ ನಿರಂತರ 7ನೇ ಬಾರಿಗೆ 1 ಕೋಟಿ ರೂ.ಗೂ ಮಿಕ್ಕಿ ಲಾಭ ದಾಖಲೆ: ಸುಂದರ ಹೆಗ್ಡೆ ರೂ.1.86 ಕೋಟಿ ನಿವ್ವಳ ಲಾಭ,ಸದಸ್ಯರಿಗೆ ಶೇ.20 ಡಿವಿಡೆಂಟ್

ವೇಣೂರು: ಸಂಘವು 2024-25ನೇ ಸಾಲಿನಲ್ಲಿ ರೂ.1,86,50,423.61 ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.20 ಡಿವಿಡೆಂಡು ನೀಡುತ್ತಿದ್ದೇವೆ. ಸಂಘವು ಇತಿಹಾಸದಲ್ಲಿಯೇ ನಿರಂತರ 7ನೇ ಬಾರಿಗೆ 1 ಕೋಟಿ ರೂ.ಗೂ ಮಿಕ್ಕಿ ಲಾಭ ಗಳಿಸಿ ದಾಖಲೆ ನಿರ್ಮಿಸಿರುವುದಕ್ಕೆ ಸಂತೋಷಪಡುತ್ತೇನೆ ಎಂದು ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ ಬಿಇ ಹೇಳಿದರು.

ಅವರು ಸೆ. 14 ರಂದು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ನಡೆದ ವೇಣೂರು ಸಿಎ ಬ್ಯಾಂಕಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಘದ ವಾರ್ಷಿಕ ವ್ಯವಹಾರದಲ್ಲಿ ಗಣನೀಯ ಹೆಚ್ಚಳವಾಗಿದ್ದು ಮುಂಬರುವ ವರ್ಷಗಳಲ್ಲಿ ಇನ್ನೂ ಹೆಚ್ಚು ಲಾಭ ಗಳಿಸುವತ್ತ ಮುನ್ನಡೆಯಲು ಸದಸ್ಯರು ಸಕಾಲದಲ್ಲಿ ಸಾಲ ಮರುಪಾವತಿಸಿ ಸಹಕಾರ ನೀಡಬೇಕೆಂದು ಎಂದರು.

ಮಹಾಸಭೆಯಲ್ಲಿ ಸಹಕಾರಿ ಸಂಘದ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಅಭಿವೃದ್ಧಿ ಪರ ಚರ್ಚೆಗಳು ನಡೆಯಿತು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ರತ್ನಾಕರ ಬಿ,ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ,ನಿರ್ದೇಶಕರಾದ ರಾಮ್ ದಾಸ್ ನಾಯಕ್,ಸಂದೀಪ್ ಹೆಗ್ಡೆ,ಎಂ.ಆರ್ ಸಂತೋಷ್,ನಾಗಪ್ಪ,ಶ್ರೀಮತಿ ಆಶಾ, ಶ್ರೀಮತಿ ರೋಹಿಣಿ,ಕೃಷ್ಣಪ್ಪ ಮೂಲ್ಯ, ಪ್ರಶಾಂತ್,ರಾಜು ನಾಯ್ಕ,ಪ್ರವೀಣ್ ಉಪಸ್ಥಿತರಿದ್ದರು.

ಸಿಬ್ಬಂದಿಗಳಾದ ಭರತ್ ರಾಜ್ ಕೆ,ಶ್ರೀಮತಿ ಗೀತಾ,ಶ್ರೀಮತಿ ದಿವ್ಯ ಕೆ,ಶ್ರೀಮತಿ ರಮ್ಯ ಪಿ ಜೈನ್,ಶ್ರೀನಿಧಿ ಭಟ್,ಚಂದ್ರಶೇಖರ ಪಿ,ಭಾಗ್ಯನಿಧಿ ಠೇವಣಿ ಏಜೆಂಟ್ ಅಜಿತ್ ಕುಮಾರ್ ಜೈನ್ ಹಾಗೂ ಸಂಘದ ಸದಸ್ಯರು ಸಹಕರಿಸಿದರು.

Related posts

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

Suddi Udaya

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya
error: Content is protected !!