25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಶಾಲಾ ಕಾಲೇಜು

ಎಸ್.ಡಿ.ಎಮ್ ಪಾಲಿಟೆಕ್ನಿಕ್ : “ರೋಬೊ ರೇಸ್ -2025”

ಉಜಿರೆ: ಸದಾ ಕೌಶಲ್ಯಭರಿತ ಶಿಕ್ಷಣಕ್ಕೆ ಆದ್ಯತೆ ನೀಡುವ ಸಂಸ್ಥೆಯ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಕೇವಲ ಥಿಯರಿ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ, ಪ್ರಾಯೋಗಿಕ ಜ್ಞಾನವನ್ನೂ ಗಾಢವಾಗಿ ಅರಿತು ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವ ಉದ್ದೇಶದಿಂದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ವಿಭಾಗವು “ರೋಬೊ ರೇಸ್ -2025” ಎಂಬ ತಾಂತ್ರಿಕ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.

ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ರೋಬೋ ರೇಸ್ ಕಾರನ್ನು ಚಾಲನೆ ಮಾಡುವುದರ ಮೂಲಕ ಉದ್ಘಾಟಿಸಿದರು. ಕಾಲೇಜಿನ 25 ತಂಡಗಳು ಭಾಗವಹಿಸಿದ್ದು, ಕಾಲೇಜಿನ ವಿದ್ಯಾರ್ಥಿಗಳೇ ಸುಮಾರು 100 ಮೀ ಉದ್ದದ ಟ್ರ್ಯಾಕ್ ತಯಾರಿಸಿದ್ದರು. 10 ವಿವಿಧ ಅಡೆತಡೆಗಳನ್ನು ಹೊಂದಿದ್ದ ಟ್ರ್ಯಾಕ್ ನಲ್ಲಿ ಮಣ್ಣು, ಮರಳು, ಕಲ್ಲು, ಏರಿಳಿತ, ನೇತಾಡುವ ಸೇತುವೆ, ಎಣ್ಣೆಯನ್ನು ಬಳಸಿ ಜಾರುವ ರೀತಿಯ ವ್ಯವಸ್ಥೆಯನ್ನು ಮಾಡಿದ್ದು ವಿಶೇಷವಾಗಿತ್ತು.

ಕಾಲೇಜಿನ ಒಟ್ಟು 25 ತಂಡಗಳು ಭಾಗವಹಿಸಿದ್ದು, ಕಾಲೇಜಿನ ವಿದ್ಯಾರ್ಥಿಗಳೇ ಸುಮಾರು 100 ಮೀ ಉದ್ದದ ಟ್ರ್ಯಾಕ್ ತಯಾರಿಸಿದ್ದರು. 10 ವಿವಿಧ ಅಡೆತಡೆಗಳನ್ನು ಹೊಂದಿದ್ದ ಟ್ರ್ಯಾಕ್ ನಲ್ಲಿ ಮಣ್ಣು, ಮರಳು, ಕಲ್ಲು, ಏರಿಳಿತ, ನೇತಾಡುವ ಸೇತುವೆ, ಎಣ್ಣೆಯನ್ನು ಬಳಸಿ ಜಾರುವ ವ್ಯವಸ್ಥೆಯನ್ನು ಮಾಡಿದ್ದು ವಿಶೇಷವಾಗಿತ್ತು. ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ್ ಜೈನ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮೇರಿ ಸ್ಮಿತಾ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಯಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ವತಿಯಿಂದ ಬಾಲಕಿಯರ ಶೌಚಾಲಯ ಕೊಡುಗೆ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!