22.6 C
ಪುತ್ತೂರು, ಬೆಳ್ತಂಗಡಿ
July 23, 2026
ಪ್ರಮುಖ ಸುದ್ದಿವರದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

ನಾರಾವಿ: ಸದಸ್ಯರ ಆರ್ಥಿಕ ಅವಶ್ಯಕತೆಗಳನ್ನು ಪೂರೈಸಲು ಸಂಘವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು ವರ್ಷಾಂತ್ಯದಲ್ಲಿ ಸಂಘವು ರೂ. 28.76 ಕೋಟಿ ಠೇವಣಿ ಹೊಂದಿರುತ್ತದೆ. ವರದಿ ಸಾಲಿನಲ್ಲಿ ರೂ. 272.37 ಕೋಟಿ ಒಟ್ಟು ವ್ಯವಹಾರ ಮಾಡಲಾಗಿದೆ. ನಮ್ಮ 5 ಗ್ರಾಮಗಳ ಸಹೃದಯಿ ಸದಸ್ಯ ಗ್ರಾಹಕರು ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿಸಿರುವುದರಿಂದ 2024-25ನೇ ಸಾಲಿನಲ್ಲಿ ಸಂಘವು ರೂ 0.89 ಲಕ್ಷ ಲಾಭ ಗಳಿಸಲು ಸಹಕಾರಿಯಾಯಿತು.ಸದಸ್ಯರಿಗೆ ಶೇ.12 ನೀಡಲಾಗುವುದು ಎಂದು ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಹೇಳಿದರು.

ಅವರು ಸೆ. 14ರಂದು ನಾರಾವಿ ಧರ್ಮಶ್ರೀ ಸಭಾಭವನದಲ್ಲಿ ನಡೆದ ನಾರಾವಿ ಸಿಎ ಬ್ಯಾಂಕಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಂಘವು ಅಡಿಟ್ ವರ್ಗೀಕರಣದಲ್ಲಿ ಎ ತರಗತಿ ಪಡೆದುಕೊಂಡಿರುತ್ತದೆ. ಅದೇ ರೀತಿ ವರದಿ ಸಾಲಿನಲ್ಲಿ ದ.ಕ. ಜಿಲ್ಲಾ ಕೇಂದ್ರ ಬ್ಯಾಂಕಿನಿಂದ 100% ಸಾಲ ವಸೂಲಾತಿಗಾಗಿ ಸಾಧನಾ ಪ್ರಶಸ್ತಿಯನ್ನು ಸಂಘವು ಪಡಕೊಂಡಿರುತ್ತದೆ ಎಂದರು.ರೈತ ಸದಸ್ಯರು ಸಂಘದ ಅಭಿವೃದ್ಧಿ ಹಾಗೂ ಅನುಕೂಲಗಳ ಬಗ್ಗೆ ಚರ್ಚಿಸಿದರು.

ವೇದಿಕೆಯಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್,ನಾರಾವಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಜಗದೀಶ್ ಹೆಗ್ಡೆ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್ ಶಶಿಕಾಂತ್ ಜೈನ್,ನಿರ್ದೇಶಕರಾದ ಸದಾನಂದ ಗೌಡ,ವಿಠಲ ಪೂಜಾರಿ,ರಾಜೇಂದ್ರ ಕುಮಾರ್,ಕೃಷ್ಣಪ್ಪ ಪೂಜಾರಿ,ಉಮೇಶ್ ಎಂ.ಕೆ,ಶೇಖರ,ಶ್ರೀಮತಿ ಯಶೋಧ,ಶ್ರೀಮತಿ ಸುಜಲತಾ,ಶ್ರೀಮತಿ ಪದ್ಮಶ್ರೀ,ಶ್ರೀಮತಿ ಸುಪ್ರಿಯಾ ಉಪಸ್ಥಿತರಿದ್ದರು.ಸಿಬ್ಬಂದಿಗಳಾದ ಶ್ರೀಮತಿ ವನಿತಾ,ಶೇಖರ ಕೆ,ಶ್ರೀಮತಿ ಮಲ್ಲಿಕಾ,ಶ್ರೇಯಾಂಸ ಕುಮಾರ್,ಅಶೋಕ,ಪೂಜಿತ್ ಎನ್,ಶ್ರೀಮತಿ ರೇಷ್ಮಾ ಜಿ ಹಾಗೂ ಸದಸ್ಯರು ಸಹಕರಿಸಿದರು.

Related posts

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ವೇಣೂರು ಪ್ರಾ.ಕೃ.ಪ. ಸಹಕಾರಿ ಸಂಘದ ನೂತನ “ಫಲ್ಗುಣಿ ಕಟ್ಟಡ” ಲೋಕಾರ್ಪಣೆ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!