July 23, 2026
ವರದಿ

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

ನಾರಾವಿ: ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ನಾರಾವಿ ಇದರ ಆಶ್ರಯದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ )ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸೆ.12ರಂದು ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾoಶುಪಾಲ ಶ್ರೀ ಸಂತೋಷ್ ಸಲ್ದಾನಾ ಎಲ್ಲರನ್ನು ಸ್ವಾಗತಿಸಿದರು. ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಸಂತ ಅಂತೋನಿ ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ವo. ಸ್ವಾಮಿ ರೂಪೇಶ್ ರವಿನ್ ತಾವರೋ “ಕಬಡ್ಡಿ ನಮ್ಮ ನೆಲದ ಸಂಸ್ಕೃತಿಯನ್ನು ಬಿಂಬಿಸುವ ಕ್ರೀಡೆ. ಕ್ರೀಡೆಯಿಂದ ಮಾತ್ರ ಒಗ್ಗಟ್ಟು ಮೂಡಿಸಲು ಸಾಧ್ಯ “ಎಂದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಾರಾವಿ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಶ್ರೀ ರಾಜವರ್ಮ ಜೈನ್. ತಾಲೂಕು ಕ್ರೀಡಾ ಸಂಯೋಜಕರಾದ ಶ್ರೀ ಸಂದೀಪ್ ಪಲ್ಲೋಡಿ,ನಾರಾವಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಸಂಜಯ್ ಮೀರಾoದ, ಕಾರ್ಯದರ್ಶಿ ಶ್ರೇಮತಿ ಎವ್ಜಿನ್ ರೋಡ್ರಿಗಸ್, ನಾರಾವಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಡೈನಾ ರೋಡ್ರಿಗಸ್, ನಾರಾವಿ ಪ್ರೌಢ ಶಾಲೆ ನಾರಾವಿಯ ಮುಖ್ಯ ಅಧ್ಯಾಪಕರಾದ ಶ್ರೀ ಗೋಪಾಲಕೃಷ್ಣ ತುಳುಪುಳೆ, ಸಂತ ಪಾವ್ಲರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಅಧ್ಯಾಪಕಿ ಶ್ರೀಮತಿ ಸೋಫಿಯಾ ಫೆರ್ನಾಂಡಿಸ್, ಇಂಗ್ಲಿಷ್ ಮೀಡಿಯಂ ಶಾಲೆಯ ಮುಖ್ಯ ಅಧ್ಯಾಪಕರಾದ ಶ್ರೀ ರಿಚರ್ಡ್ ಮೋರಸ್, ನಾರಾವಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಪ್ರದೀಪ್ ಬಿ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕಿನ 16ಬಾಲಕರ ಹಾಗೂ 5ಬಾಲಕಿಯರ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಬಾಲಕರ ಮತ್ತು ಬಾಲಕಿಯರ ಎರಡೂ ವಿಭಾಗದಲ್ಲಿ ಕ್ರಮವಾಗಿ ಪ್ರಥಮ ಸ್ಥಾನವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಉಜಿರೆ, ದ್ವಿತೀಯ ಸ್ಥಾನವನ್ನು ಸರಕಾರಿ ಪದವಿಪೂರ್ವ ಕಾಲೇಜು ವೇಣೂರು ಪಡೆದುಕೊಂಡವು. ಉಪನ್ಯಾಸಕರಾದ ಶ್ರೀ ಅವಿಲ್ ಮೋರಸ್ ಕಾರ್ಯಕ್ರಮ ನಿರೂಪಿಸಿದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ಆರಂಬೋಡಿ ಬಿರ್ವೆರ್ ಕೂಟ ವತಿಯಿಂದ ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣ ರವರಿಗೆ ಸನ್ಮಾನ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಅನುಗ್ರಹ ಸಮಾಗಮ 2025

Suddi Udaya

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya
error: Content is protected !!