23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

ಬೆಳ್ತಂಗಡಿ: ಉಜಿರೆಯ NABH ಪುರಸ್ಕೃತ ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್ ಐ ಸಿ ಯು ಸೌಲಭ್ಯವುಳ್ಳ ನವೀನ ಅಂಬ್ಯುಲನ್ಸನ್ನು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಮತ್ತು ಡಾ. ಭಾರತಿ ದಂಪತಿಗಳು ಗಣಪತಿ ವಿಗ್ರಹಕ್ಕೆ ಪುಷ್ಪ ಮಾಲೆಯನ್ನು ಅರ್ಪಿಸುವ ಮೂಲಕ ಲೋಕಾರ್ಪಣೆ ಮಾಡಿದರು. ಇದು ಸಂಪೂರ್ಣ ಹವಾನಿಯಂತ್ರಿತವಾಗಿದ್ದು ವೆಂಟಿಲೇಟರ್ ಸಹಿತ ಐ ಸಿ ಯು ನಲ್ಲಿರುವ ಎಲ್ಲ ಸೌಲಭ್ಯಗಳನ್ನು ಹೊಂದಿರುತ್ತದೆ. ಮತ್ತು ವಿಶೇಷವಾಗಿ ಹವಾನಿಯಂತ್ರಿತ ಶೈತ್ಯಾಗಾರವಿದ್ದು ಉಜಿರೆಯಿಂದ ದೂರದ ಕಾಶ್ಮೀರದವರೆಗೂ ಶವವನ್ನು (ಕೆಡದಂತೆ) ಸಾಗಿಸಲು ಸಹಕಾರಿಯಾಗಲಿದೆ ಎಂದು ಡಾ.ಗೋಪಾಲಕೃಷ್ಣ ಮಾಹಿತಿ ನೀಡಿದರು. ಆಸ್ಪತ್ರೆಯು ಪ್ರಾರಂಭವಾಗಿ 25ನೇ ವರ್ಷದಲ್ಲಿ ಇಂಥ ಹೈಟೆಕ್‌ ವ್ಯವಸ್ಥೆಯ ಅಂಬ್ಯುಲನ್ಸನ್ನು ಈ ಪರಿಸರಕ್ಕೆ ಕೊಡುಗೆಯಾಗಿ ನೀಡಲು ಹೆಮ್ಮೆಯಾಗುತ್ತಿದೆ ಎಂದು ಡಾ.ಗೋಪಾಲಕೃಷ್ಣ ದಂಪತಿಗಳು ಅನಿಸಿಕೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರುಗಳಾದ ಡಾ.ಆದಿತ್ಯ ರಾವ್, ಡಾ. ಅಂಕಿತ ಜಿ ಭಟ್, ಡಾ. ಪ್ರದ್ಯೋತ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಕಡಿರುದ್ಯಾವರ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಹೊಲಿಗೆ ತರಬೇತಿ ಉದ್ಘಾಟನೆ

Suddi Udaya

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya
error: Content is protected !!