37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

ಬೆಳ್ತಂಗಡಿ ಎನ್ ಆರ್ ಎಲ್ ಎಂ ತಾಲೂಕು ಅಭಿಯಾನ ನಿರ್ವಹಣಾ ಘಟಕ ವತಿಯಿಂದ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪುಸ್ತಕ ಬರಹಗಾರರ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೆಪ್ಟಂಬರ್ 10 ರಿಂದ 12ರವರೆಗೆ ನಡೆಸಲಾಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ತರಬೇತಿಯ ಒಕ್ಕೂಟಗಳ ಕಾರ್ಯನಿರ್ವಹಣೆ ಮತ್ತು ಎಂಬಿಕೆಯವರ ಪಾತ್ರ ಹಾಗೂ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಕಾರ್ಯಕ್ರಮದ ಉದ್ದೇಶದ ಕುರಿತಂತೆ ಪ್ರಾಸ್ತಾವಿವಾಗಿ ಮಾತನಾಡಿದರು.
ರಾಜ್ಯ ಸಂಪನ್ಮೂಲ ವ್ಯಕ್ತಿಯಾದ ಶ್ರೀ ಲಕ್ಷ್ಮಣ್ ಇವರು ತರಬೇತಿಯನ್ನು ನೀಡಿದರು.

ಬೆಳ್ತಂಗಡಿ ತಾಲೂಕಿನ 48 ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಿಂದ 48 ಜನ ಮತ್ತು ಬಂಟ್ವಾಳ ತಾಲೂಕಿನ 6 ಜನ ಮುಖ್ಯ ಪುಸ್ತಕ ಬರಹಗಾರರು ತರಬೇತಿಯಲ್ಲಿ ಭಾಗವಹಿಸಿದರು.

ತರಬೇತಿಯ ದಿನಗಳಲ್ಲೂ ಉಜಿರೆ ಸಂಜೀವಿನಿ ಒಕ್ಕೂಟದ ಅಕ್ಕ ಕೆಫೆಯಿಂದ ಉಪಹಾರ ಮತ್ತು ಭೋಜನದ ವ್ಯವಸ್ಥೆಯನ್ನು ಮಾಡಲಾಯಿತು.

ತರಬೇತಿ ಕಾರ್ಯಕ್ರಮದಲ್ಲಿ ತಾಲೂಕು ವ್ಯವಸ್ಥಾಪಕರು, ವಲಯ ಮೇಲ್ವಿಚಾರಕರುಗಳು, ಬಿಆರ್ ಪಿ -ಪಿಆರ್ ಐ ಉಪಸ್ಥಿತರಿದ್ದು ತರಬೇತಿಯ ಯಶಸ್ಸಿಗೆ ಸಹಕರಿಸಿದರು.

Related posts

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Suddi Udaya

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya
error: Content is protected !!