22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

ಬೆಳ್ತಂಗಡಿ: ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನತೀರ್ಥಕ್ಷೇತ್ರದಲ್ಲಿ ಶನಿವಾರ ಚಂದನ ಷಷ್ಠಿ ನೋಂಪಿ ವಿಧಾನದ ಉದ್ಯಾಪನಾ ಕಾರ್ಯಕ್ರಮ ವಿಧಿ-ವಿಧಾನಗಳೊಂದಿಗೆ ಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.ಮೂರೂ ಬಸದಿಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಬಳಿಕ ಸಾಮೂಹಿಕ ಪಂಚನಮಸ್ಕಾರ ಮಂತ್ರ ಪಠಣದ ಬಳಿಕ ಸಾಮೂಹಿಕ ಅಷ್ಟವಿಧಾರ್ಚನೆ ಪೂಜೆ ನಡೆಯಿತು. ಚಂದ್ರಪ್ರಭ ತೀರ್ಥಂಕರರ ಪೂಜೆ, ಭಗವಾನ್ ಶಾಂತಿನಾಥ ಸ್ವಾಮಿ ಪೂಜೆ, ನವದೇವತೆಗಳ ಪೂಜೆ, ಪಂಚಪರಮೇಷ್ಠಿಗಳ ಪೂಜೆ, ಕ್ಷೇತ್ರಪಾಲಪೂಜೆ, ಪದ್ಮಾವತಿ ದೇವಿಪೂಜೆ, ಬ್ರಹ್ಮಯಕ್ಷ ಪೂಜೆ, ಭಗವಾನ್ ಬಾಹುಬಲಿ ಸ್ವಾಮಿ ಪೂಜೆ ಮತ್ತು ಶ್ರುತ ಪೂಜೆ ನಡೆಸಲಾಯಿತು.

೧೦೮ ಮಂತ್ರಪುಷ್ಟ ಅರ್ಚನೆ ಬಳಿಕ ಜಯಮಾಲಾ ಅರ್ಘ್ಯ ಅರ್ಪಿಸಲಾಯಿತು.ಬಸದಿಯ ಪ್ರಧಾನ ಅರ್ಚಕ ಕೆ. ಜಯರಾಜ ಇಂದ್ರರ ನೇತೃತ್ವದಲ್ಲಿ ನವೀನ ಕುಮಾರ ಇಂದ್ರ ಮತ್ತು ಕೆ. ಮಹಾವೀರ ಇಂದ್ರರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು.ಧರ್ಮಸ್ಥಳದ ಸೌಮ್ಯಸುಭಾಶ್ ಮತ್ತು ಬಳಗದವರ ಜಿನಭಜನೆಗಳ ಸುಶ್ರಾವ್ಯ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.ಮೂಡಬಿದ್ರೆಯ ಸರ್ವೇಶ್ ಜೈನ್ ಮತ್ತು ಬಳಗದವರಿಂದ ಜಿನಭಕ್ತಿ ಗೀತೆಗಳ ಗಾಯನ ನಡೆಯಿತು.ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ್ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಶ್ರೀನಾಥ್ ಬಳ್ಳಾಲ್, ವಿನಯಾ ಜೆ. ಬಳ್ಳಾಲ್, ವೈಶಾಲಿ ಬಳ್ಳಾಲ್, ಡಾ. ಪ್ರಿಯಾ ಬಳ್ಳಾಲ್, ವಿಜಯಾ ಬ್ಯಾಂಕ್ ನಿವೃತ್ತ ಮೇನೇಜರ್ ಎಂ. ಜಿನರಾಜ ಶೆಟ್ಟಿ ಮತ್ತು ಬಳ್ಳಾಲ್ ಕುಟುಂಬಸ್ಥರು ಉಪಸ್ಥಿತರಿದ್ದರು.೧೮ ಮಂದಿ ಚಂದನ ಷಷ್ಠಿ ನೋಂಪಿ ವ್ರತಧಾರಿಗಳಲ್ಲಿ ೮ ಮಂದಿ ೬ ವರ್ಷಗಳನ್ನು ಪೂರೈಸಿದ್ದು ನೋಂಪಿ ಉದ್ಯಾಪನೆ ಮಾಡಿದರು.ನೋಂಪಿ ವ್ರತಧಾರಿಗಳಾದ ಕುಂಡದಬೆಟ್ಟು ವಿನಯಮ್ಮ, ಸಬ್ರಬೈಲು ಸುಮಲತಾ ಜೀವಂಧರ ಚೌಟ ಮತ್ತು ಸುಜಾತ ಧನಕೀರ್ತಿ ಆರಿಗ ಧರ್ಮಸ್ಥಳ ಪ್ರಕಟಿಸಿದ “ಚಂದನ ಷಷ್ಠಿ ನೋಂಪಿ ವಿಧಾನ” ಕೃತಿಯನ್ನು ಸ್ವಾಮೀಜಿ ಬಿಡುಗಡೆಗೊಳಿಸಿ ಆಶೀರ್ವದಿಸಿದರು.ಕೃತಿಯನ್ನು ಎಲ್ಲರಿಗೂ ಶಾಸ್ತçದಾನವಾಗಿ ವಿತರಿಸಲಾಯಿತು.

ಸ್ವಾಮೀಜಿಯವರಿಂದ ಮಂಗಲಪ್ರವಚನ:ನೋಂಪಿಗಳಿಂದ ಕರ್ಮನಿರ್ಜರೆಯಾಗಿ ಮೋಕ್ಷ ಪ್ರಾಪ್ತಿ: ಉಪನ್ಯಾಸ ಹಾಗೂ ಕಠಿಣವ್ರತ ನಿಯಮಗಳ ಪಾಲನೆಯೊಂದಿಗೆ ಚಂದನ ಷಷ್ಠಿಯಂತಹ ಪವಿತ್ರ ನೋಂಪಿಗಳನ್ನು ಮಾಡಿದರೆ ನಮ್ಮ ಕರ್ಮಗಳ ನಿರ್ಜರೆಯಾಗಿ ರೋಗಗಳೂ ನಿವಾರಣೆಯಾಗಿ ಶಾಶ್ವತ ಸುಖವನ್ನೀಯುವ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ಮಂಗಲಪ್ರವಚನ ನೀಡಿದ ಶ್ರವಣಬೆಳಗೊಳದ ಸ್ವಾಮೀಜಿ ಹೇಳಿದರು.ಹೆಚ್ಚಾಗಿ ನೋಂಪಿಗಳನ್ನು ಚಾತುರ್ಮಾಸದ ಅವಧಿಯಲ್ಲಿ ಭಾದ್ರಪದ ಮಾಸದಲ್ಲಿ ಮಾಡುತ್ತಾರೆ. ಏಕೆಂದರೆ ಭಾದ್ರಪದ ಮಾಸ ಬಹಳ ಹಿತಕರವಾಗಿದ್ದು ಆಗ ನಾವು ಮಾಡಿದ ಭಾವನೆಗಳು ಭದ್ರವಾಗುತ್ತವೆ. ಪರಿಶುದ್ಧ ತನು, ಮನದೊಂದಿಗೆ ವೃತ ನಿಯಮಗಳ ಪಾಲನೆಯೊಂದಿಗೆ ದೇವರು ಮತ್ತು ಗುರುಗಳ ಸೇವೆ, ಆರಾಧನೆ ಮಾಡಬೇಕು. ಆಧುನಿಕತೆಯ ನೆಪದಲ್ಲಿ ಎಂದೂ ಅಪವಿತ್ರ, ಅವಿನಯ ಮಾಡಬಾರದು ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದರು.ಬಸದಿಯ ಅನುವಂಶೀಯ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ಅಧ್ಯಕ್ಷತೆ ವಹಿಸಿದರು.

ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶಿಕ್ಷಕ ಧರಣೇಂದ್ರ ಕುಮಾರ್ ಕೊನೆಯಲ್ಲಿ ಧನ್ಯವಾದವಿತ್ತರು.

Related posts

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಕಂಠ ಶಸ್ತ್ರಚಿಕಿತ್ಸೆ ಯಶಸ್ವಿ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya
error: Content is protected !!