22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

ಮಾಲಾಡಿ : ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿಯನ್ನು ಸೆ. 14 ರಂದು ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ನಾನು ಓರ್ವ ಜನಪ್ರತಿನಿಧಿಯಾಗಿ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಮಾಲಾಡಿ ಶಕ್ತಿ ಕೇಂದ್ರ ಮತ್ತು ಸಮಸ್ತ ನಾಗರಿಕರ ಪರವಾಗಿ ಶಾಸಕರನ್ನು ಅಭಿನಂದಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,ಮಡoತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಜೋಯಲ್ ಮೆಂಡೋನ್ಸ, ಮಹಿಳಾ ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್, ಮಾಲಾಡಿ, ಸೋಣಂದೂರು ಶಕ್ತಿಕೇಂದ್ರ ಅಧ್ಯಕ್ಷರುಗಳಾದ ರಾಜೇಶ್ ಕೋಡ್ಯಲು, ದಿನೇಶ್ ಕರ್ಕೇರ, ಪಂಚಾಯತ್ ಸದಸ್ಯೆ ಶ್ರೀಮತಿ ಜಯಂತಿ ನಾಯಕ್,ಆಟೋ ಮಾಲಕ- ಚಾಲಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು,ಮಾಜಿ ಪಂಚಾಯತ್ ಸದಸ್ಯರುಗಳು,ಮಡoತ್ಯಾರು ಸಿ ಎ ಬ್ಯಾಂಕ್ ಮತ್ತು ಹಾಲು ಉತ್ಪಾದಕರ ಸಂಘದ ನಿರ್ದೇಶಕರುಗಳು, ಬೂತ್ ಅಧ್ಯಕ್ಷರುಗಳು ಕಾರ್ಯದರ್ಶಿಗಳು,ಪಕ್ಷದ ಅನ್ಯನ್ಯ ಜವಾಬ್ದಾರಿ ಇರುವ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ನಾಗರಿಕ ಬಂಧುಗಳು ಉಪಸ್ಥಿತರಿದ್ದರು.

Related posts

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವ; ಮೇ 30: ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya
error: Content is protected !!