23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಶಾಲಾ ಕಾಲೇಜು

ಎಸ್.ಡಿ.ಎಮ್ ಪಾಲಿಟೆಕ್ನಿಕ್ : “ರೋಬೊ ರೇಸ್ -2025”

ಉಜಿರೆ: ಸದಾ ಕೌಶಲ್ಯಭರಿತ ಶಿಕ್ಷಣಕ್ಕೆ ಆದ್ಯತೆ ನೀಡುವ ಸಂಸ್ಥೆಯ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಕೇವಲ ಥಿಯರಿ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ, ಪ್ರಾಯೋಗಿಕ ಜ್ಞಾನವನ್ನೂ ಗಾಢವಾಗಿ ಅರಿತು ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವ ಉದ್ದೇಶದಿಂದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ವಿಭಾಗವು “ರೋಬೊ ರೇಸ್ -2025” ಎಂಬ ತಾಂತ್ರಿಕ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.

ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ರೋಬೋ ರೇಸ್ ಕಾರನ್ನು ಚಾಲನೆ ಮಾಡುವುದರ ಮೂಲಕ ಉದ್ಘಾಟಿಸಿದರು. ಕಾಲೇಜಿನ 25 ತಂಡಗಳು ಭಾಗವಹಿಸಿದ್ದು, ಕಾಲೇಜಿನ ವಿದ್ಯಾರ್ಥಿಗಳೇ ಸುಮಾರು 100 ಮೀ ಉದ್ದದ ಟ್ರ್ಯಾಕ್ ತಯಾರಿಸಿದ್ದರು. 10 ವಿವಿಧ ಅಡೆತಡೆಗಳನ್ನು ಹೊಂದಿದ್ದ ಟ್ರ್ಯಾಕ್ ನಲ್ಲಿ ಮಣ್ಣು, ಮರಳು, ಕಲ್ಲು, ಏರಿಳಿತ, ನೇತಾಡುವ ಸೇತುವೆ, ಎಣ್ಣೆಯನ್ನು ಬಳಸಿ ಜಾರುವ ರೀತಿಯ ವ್ಯವಸ್ಥೆಯನ್ನು ಮಾಡಿದ್ದು ವಿಶೇಷವಾಗಿತ್ತು.

ಕಾಲೇಜಿನ ಒಟ್ಟು 25 ತಂಡಗಳು ಭಾಗವಹಿಸಿದ್ದು, ಕಾಲೇಜಿನ ವಿದ್ಯಾರ್ಥಿಗಳೇ ಸುಮಾರು 100 ಮೀ ಉದ್ದದ ಟ್ರ್ಯಾಕ್ ತಯಾರಿಸಿದ್ದರು. 10 ವಿವಿಧ ಅಡೆತಡೆಗಳನ್ನು ಹೊಂದಿದ್ದ ಟ್ರ್ಯಾಕ್ ನಲ್ಲಿ ಮಣ್ಣು, ಮರಳು, ಕಲ್ಲು, ಏರಿಳಿತ, ನೇತಾಡುವ ಸೇತುವೆ, ಎಣ್ಣೆಯನ್ನು ಬಳಸಿ ಜಾರುವ ವ್ಯವಸ್ಥೆಯನ್ನು ಮಾಡಿದ್ದು ವಿಶೇಷವಾಗಿತ್ತು. ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ್ ಜೈನ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮೇರಿ ಸ್ಮಿತಾ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಶಾಲೆ ವಿದ್ಯಾರ್ಥಿನಿ ಚಾಂಪಿಯನ್

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya
error: Content is protected !!