September 6, 2026
ಪ್ರಮುಖ ಸುದ್ದಿವರದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

ನಾರಾವಿ: ಸದಸ್ಯರ ಆರ್ಥಿಕ ಅವಶ್ಯಕತೆಗಳನ್ನು ಪೂರೈಸಲು ಸಂಘವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು ವರ್ಷಾಂತ್ಯದಲ್ಲಿ ಸಂಘವು ರೂ. 28.76 ಕೋಟಿ ಠೇವಣಿ ಹೊಂದಿರುತ್ತದೆ. ವರದಿ ಸಾಲಿನಲ್ಲಿ ರೂ. 272.37 ಕೋಟಿ ಒಟ್ಟು ವ್ಯವಹಾರ ಮಾಡಲಾಗಿದೆ. ನಮ್ಮ 5 ಗ್ರಾಮಗಳ ಸಹೃದಯಿ ಸದಸ್ಯ ಗ್ರಾಹಕರು ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿಸಿರುವುದರಿಂದ 2024-25ನೇ ಸಾಲಿನಲ್ಲಿ ಸಂಘವು ರೂ 0.89 ಲಕ್ಷ ಲಾಭ ಗಳಿಸಲು ಸಹಕಾರಿಯಾಯಿತು.ಸದಸ್ಯರಿಗೆ ಶೇ.12 ನೀಡಲಾಗುವುದು ಎಂದು ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಹೇಳಿದರು.

ಅವರು ಸೆ. 14ರಂದು ನಾರಾವಿ ಧರ್ಮಶ್ರೀ ಸಭಾಭವನದಲ್ಲಿ ನಡೆದ ನಾರಾವಿ ಸಿಎ ಬ್ಯಾಂಕಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಂಘವು ಅಡಿಟ್ ವರ್ಗೀಕರಣದಲ್ಲಿ ಎ ತರಗತಿ ಪಡೆದುಕೊಂಡಿರುತ್ತದೆ. ಅದೇ ರೀತಿ ವರದಿ ಸಾಲಿನಲ್ಲಿ ದ.ಕ. ಜಿಲ್ಲಾ ಕೇಂದ್ರ ಬ್ಯಾಂಕಿನಿಂದ 100% ಸಾಲ ವಸೂಲಾತಿಗಾಗಿ ಸಾಧನಾ ಪ್ರಶಸ್ತಿಯನ್ನು ಸಂಘವು ಪಡಕೊಂಡಿರುತ್ತದೆ ಎಂದರು.ರೈತ ಸದಸ್ಯರು ಸಂಘದ ಅಭಿವೃದ್ಧಿ ಹಾಗೂ ಅನುಕೂಲಗಳ ಬಗ್ಗೆ ಚರ್ಚಿಸಿದರು.

ವೇದಿಕೆಯಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್,ನಾರಾವಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಜಗದೀಶ್ ಹೆಗ್ಡೆ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್ ಶಶಿಕಾಂತ್ ಜೈನ್,ನಿರ್ದೇಶಕರಾದ ಸದಾನಂದ ಗೌಡ,ವಿಠಲ ಪೂಜಾರಿ,ರಾಜೇಂದ್ರ ಕುಮಾರ್,ಕೃಷ್ಣಪ್ಪ ಪೂಜಾರಿ,ಉಮೇಶ್ ಎಂ.ಕೆ,ಶೇಖರ,ಶ್ರೀಮತಿ ಯಶೋಧ,ಶ್ರೀಮತಿ ಸುಜಲತಾ,ಶ್ರೀಮತಿ ಪದ್ಮಶ್ರೀ,ಶ್ರೀಮತಿ ಸುಪ್ರಿಯಾ ಉಪಸ್ಥಿತರಿದ್ದರು.ಸಿಬ್ಬಂದಿಗಳಾದ ಶ್ರೀಮತಿ ವನಿತಾ,ಶೇಖರ ಕೆ,ಶ್ರೀಮತಿ ಮಲ್ಲಿಕಾ,ಶ್ರೇಯಾಂಸ ಕುಮಾರ್,ಅಶೋಕ,ಪೂಜಿತ್ ಎನ್,ಶ್ರೀಮತಿ ರೇಷ್ಮಾ ಜಿ ಹಾಗೂ ಸದಸ್ಯರು ಸಹಕರಿಸಿದರು.

Related posts

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಪರ ಪ್ರತಿಬಂಧಕಾದೇಶ ಜಾರಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಸೂಚನೆ

Suddi Udaya

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya
error: Content is protected !!