22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಮಂಡಲದ ವತಿಯಿಂದ ಲಾಯಿಲ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ

ಲಾಯಿಲ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಸಂಘಟನಾ ದೃಷ್ಟಿಯಿಂದ ಸೆಪ್ಟೆಂಬರ್ 14 ರಂದು ಲಾಯಿಲ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಿತು.

ಪಕ್ಷದ ಹಿರಿಯ ಕಾರ್ಯಕರ್ತರಾದ ಪುಟ್ಟಣ್ಣ ಕುಂಬಾರ ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ವಿಧಾನಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರು ಉದ್ಘಾಟನಾ ಭಾಷಣ ಜೊತೆಗೆ ಪಕ್ಷ ಸಂಘಟನೆ ಮತ್ತು ಕಾರ್ಯಾಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು. ವೇದಿಕೆಯಲ್ಲಿ ಅಭ್ಯಾಸ ವರ್ಗದ ಪ್ರಭಾರಿಗಳಾದ ಜಯಂತ್ ಗೌಡ ಗುರಿಪಳ್ಳ ಉಪಸ್ಥಿತರಿದ್ದರು.

ಪಕ್ಷದ ಪ್ರಮುಖರಾದ ನಂದಕುಮಾರ್, ಮಹಾಬಲ ಗೌಡ, ಮೋಹನ್ ಅಂಡಿಂಜೆ ಅಭ್ಯಾಸ ವರ್ಗದ ಬೈಠಕ್ ತೆಗೆದುಕೊಂಡರು.

ಸಮಾರೋಪ ಭಾಷಣ ವನ್ನು ಶಾಸಕ ಹರೀಶ್ ಪೂಂಜಾರವರು ನೆರವೇರಿಸಿದರು. ವೇದಿಕೆಯಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ಎಂ. ಕೆ, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ, ಶಕ್ತಿ ಕೇಂದ್ರ ಅಧ್ಯಕ್ಷರಾದ ಗಣೇಶ್ ಕಣ್ಣಾಜೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತಾಲೂಕು ಎ. ಸಿ ಮೋರ್ಚಾದ ಅಧ್ಯಕ್ಷರಾದ ಈಶ್ವರ ಭೈರ, ಮಂಡಲದ ಕಾರ್ಯದರ್ಶಿಗಳಾದ ಗಿರೀಶ್ ಡೋಂಗ್ರೆ ಹಾಗೂ ಆಶಾ ಸಲ್ದಾನ, ಯುವ ಮೋರ್ಚಾದ ಉಪಾಧ್ಯಕ್ಷರಾದ ಗಣೇಶ್ ಲಾಯಿಲ ಹಾಗೂ ಪಂಚಾಯತ್ ಸದಸ್ಯರುಗಳು, ಮಿಲ್ಕ್ ಸೊಸೈಟಿ ನಿರ್ದೇಶಕರುಗಳು,ಸಿ. ಎ ಬ್ಯಾಂಕ್ ನಿರ್ದೇಶಕರುಗಳು,ಬೂತ್ ಪದಾಧಿಕಾರಿಗಳು, ಪಕ್ಷದ ಅನ್ಯನ್ಯ ಜವಾಬ್ದಾರಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಬಿಜೆಪಿ ಗೀತೆ ಯನ್ನು ಸುಧಾಕರ್ ಬಿ.ಎಲ್ ರವರು ಹಾಡಿದರು.ಮಂಡಲ ಬೂತ್ ಅಧ್ಯಕ್ಷರಾದ ಮಹೇಶ್ ಕುಲಾಲ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.ಸುಮಾರು 345 ಕ್ಕೂ ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

Suddi Udaya
error: Content is protected !!