25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

ಬೆಳ್ತಂಗಡಿ: ಉಜಿರೆಯ NABH ಪುರಸ್ಕೃತ ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್ ಐ ಸಿ ಯು ಸೌಲಭ್ಯವುಳ್ಳ ನವೀನ ಅಂಬ್ಯುಲನ್ಸನ್ನು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಮತ್ತು ಡಾ. ಭಾರತಿ ದಂಪತಿಗಳು ಗಣಪತಿ ವಿಗ್ರಹಕ್ಕೆ ಪುಷ್ಪ ಮಾಲೆಯನ್ನು ಅರ್ಪಿಸುವ ಮೂಲಕ ಲೋಕಾರ್ಪಣೆ ಮಾಡಿದರು. ಇದು ಸಂಪೂರ್ಣ ಹವಾನಿಯಂತ್ರಿತವಾಗಿದ್ದು ವೆಂಟಿಲೇಟರ್ ಸಹಿತ ಐ ಸಿ ಯು ನಲ್ಲಿರುವ ಎಲ್ಲ ಸೌಲಭ್ಯಗಳನ್ನು ಹೊಂದಿರುತ್ತದೆ. ಮತ್ತು ವಿಶೇಷವಾಗಿ ಹವಾನಿಯಂತ್ರಿತ ಶೈತ್ಯಾಗಾರವಿದ್ದು ಉಜಿರೆಯಿಂದ ದೂರದ ಕಾಶ್ಮೀರದವರೆಗೂ ಶವವನ್ನು (ಕೆಡದಂತೆ) ಸಾಗಿಸಲು ಸಹಕಾರಿಯಾಗಲಿದೆ ಎಂದು ಡಾ.ಗೋಪಾಲಕೃಷ್ಣ ಮಾಹಿತಿ ನೀಡಿದರು. ಆಸ್ಪತ್ರೆಯು ಪ್ರಾರಂಭವಾಗಿ 25ನೇ ವರ್ಷದಲ್ಲಿ ಇಂಥ ಹೈಟೆಕ್‌ ವ್ಯವಸ್ಥೆಯ ಅಂಬ್ಯುಲನ್ಸನ್ನು ಈ ಪರಿಸರಕ್ಕೆ ಕೊಡುಗೆಯಾಗಿ ನೀಡಲು ಹೆಮ್ಮೆಯಾಗುತ್ತಿದೆ ಎಂದು ಡಾ.ಗೋಪಾಲಕೃಷ್ಣ ದಂಪತಿಗಳು ಅನಿಸಿಕೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರುಗಳಾದ ಡಾ.ಆದಿತ್ಯ ರಾವ್, ಡಾ. ಅಂಕಿತ ಜಿ ಭಟ್, ಡಾ. ಪ್ರದ್ಯೋತ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

Suddi Udaya

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!