22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

ಬೆಳ್ತಂಗಡಿ: ಉಜಿರೆಯ NABH ಪುರಸ್ಕೃತ ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್ ಐ ಸಿ ಯು ಸೌಲಭ್ಯವುಳ್ಳ ನವೀನ ಅಂಬ್ಯುಲನ್ಸನ್ನು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಮತ್ತು ಡಾ. ಭಾರತಿ ದಂಪತಿಗಳು ಗಣಪತಿ ವಿಗ್ರಹಕ್ಕೆ ಪುಷ್ಪ ಮಾಲೆಯನ್ನು ಅರ್ಪಿಸುವ ಮೂಲಕ ಲೋಕಾರ್ಪಣೆ ಮಾಡಿದರು. ಇದು ಸಂಪೂರ್ಣ ಹವಾನಿಯಂತ್ರಿತವಾಗಿದ್ದು ವೆಂಟಿಲೇಟರ್ ಸಹಿತ ಐ ಸಿ ಯು ನಲ್ಲಿರುವ ಎಲ್ಲ ಸೌಲಭ್ಯಗಳನ್ನು ಹೊಂದಿರುತ್ತದೆ. ಮತ್ತು ವಿಶೇಷವಾಗಿ ಹವಾನಿಯಂತ್ರಿತ ಶೈತ್ಯಾಗಾರವಿದ್ದು ಉಜಿರೆಯಿಂದ ದೂರದ ಕಾಶ್ಮೀರದವರೆಗೂ ಶವವನ್ನು (ಕೆಡದಂತೆ) ಸಾಗಿಸಲು ಸಹಕಾರಿಯಾಗಲಿದೆ ಎಂದು ಡಾ.ಗೋಪಾಲಕೃಷ್ಣ ಮಾಹಿತಿ ನೀಡಿದರು. ಆಸ್ಪತ್ರೆಯು ಪ್ರಾರಂಭವಾಗಿ 25ನೇ ವರ್ಷದಲ್ಲಿ ಇಂಥ ಹೈಟೆಕ್‌ ವ್ಯವಸ್ಥೆಯ ಅಂಬ್ಯುಲನ್ಸನ್ನು ಈ ಪರಿಸರಕ್ಕೆ ಕೊಡುಗೆಯಾಗಿ ನೀಡಲು ಹೆಮ್ಮೆಯಾಗುತ್ತಿದೆ ಎಂದು ಡಾ.ಗೋಪಾಲಕೃಷ್ಣ ದಂಪತಿಗಳು ಅನಿಸಿಕೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರುಗಳಾದ ಡಾ.ಆದಿತ್ಯ ರಾವ್, ಡಾ. ಅಂಕಿತ ಜಿ ಭಟ್, ಡಾ. ಪ್ರದ್ಯೋತ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಆಟೋರಿಕ್ಷಾ ಕಾರ್ಮಿಕರ ಬದುಕು ಉಳಿಸಲು ದರ ಪರಿಷ್ಕರಣೆ ಅನಿವಾರ್ಯ: ಬಿ.ಎಂ.ಎಸ್

Suddi Udaya
error: Content is protected !!