23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

ಬೆಳ್ತಂಗಡಿ ಎನ್ ಆರ್ ಎಲ್ ಎಂ ತಾಲೂಕು ಅಭಿಯಾನ ನಿರ್ವಹಣಾ ಘಟಕ ವತಿಯಿಂದ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪುಸ್ತಕ ಬರಹಗಾರರ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೆಪ್ಟಂಬರ್ 10 ರಿಂದ 12ರವರೆಗೆ ನಡೆಸಲಾಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ತರಬೇತಿಯ ಒಕ್ಕೂಟಗಳ ಕಾರ್ಯನಿರ್ವಹಣೆ ಮತ್ತು ಎಂಬಿಕೆಯವರ ಪಾತ್ರ ಹಾಗೂ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಕಾರ್ಯಕ್ರಮದ ಉದ್ದೇಶದ ಕುರಿತಂತೆ ಪ್ರಾಸ್ತಾವಿವಾಗಿ ಮಾತನಾಡಿದರು.
ರಾಜ್ಯ ಸಂಪನ್ಮೂಲ ವ್ಯಕ್ತಿಯಾದ ಶ್ರೀ ಲಕ್ಷ್ಮಣ್ ಇವರು ತರಬೇತಿಯನ್ನು ನೀಡಿದರು.

ಬೆಳ್ತಂಗಡಿ ತಾಲೂಕಿನ 48 ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಿಂದ 48 ಜನ ಮತ್ತು ಬಂಟ್ವಾಳ ತಾಲೂಕಿನ 6 ಜನ ಮುಖ್ಯ ಪುಸ್ತಕ ಬರಹಗಾರರು ತರಬೇತಿಯಲ್ಲಿ ಭಾಗವಹಿಸಿದರು.

ತರಬೇತಿಯ ದಿನಗಳಲ್ಲೂ ಉಜಿರೆ ಸಂಜೀವಿನಿ ಒಕ್ಕೂಟದ ಅಕ್ಕ ಕೆಫೆಯಿಂದ ಉಪಹಾರ ಮತ್ತು ಭೋಜನದ ವ್ಯವಸ್ಥೆಯನ್ನು ಮಾಡಲಾಯಿತು.

ತರಬೇತಿ ಕಾರ್ಯಕ್ರಮದಲ್ಲಿ ತಾಲೂಕು ವ್ಯವಸ್ಥಾಪಕರು, ವಲಯ ಮೇಲ್ವಿಚಾರಕರುಗಳು, ಬಿಆರ್ ಪಿ -ಪಿಆರ್ ಐ ಉಪಸ್ಥಿತರಿದ್ದು ತರಬೇತಿಯ ಯಶಸ್ಸಿಗೆ ಸಹಕರಿಸಿದರು.

Related posts

ಎಕ್ಸೆಲ್ : ವಾಣಿಜ್ಯ ವಿಭಾಗದ ಅಧ್ಯಯನ ಸಾಮಾಗ್ರಿ ಲೋಕಾರ್ಪಣೆ

Suddi Udaya

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya
error: Content is protected !!