July 23, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

ಬೆಳ್ತಂಗಡಿ ಎನ್ ಆರ್ ಎಲ್ ಎಂ ತಾಲೂಕು ಅಭಿಯಾನ ನಿರ್ವಹಣಾ ಘಟಕ ವತಿಯಿಂದ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪುಸ್ತಕ ಬರಹಗಾರರ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೆಪ್ಟಂಬರ್ 10 ರಿಂದ 12ರವರೆಗೆ ನಡೆಸಲಾಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ತರಬೇತಿಯ ಒಕ್ಕೂಟಗಳ ಕಾರ್ಯನಿರ್ವಹಣೆ ಮತ್ತು ಎಂಬಿಕೆಯವರ ಪಾತ್ರ ಹಾಗೂ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಕಾರ್ಯಕ್ರಮದ ಉದ್ದೇಶದ ಕುರಿತಂತೆ ಪ್ರಾಸ್ತಾವಿವಾಗಿ ಮಾತನಾಡಿದರು.
ರಾಜ್ಯ ಸಂಪನ್ಮೂಲ ವ್ಯಕ್ತಿಯಾದ ಶ್ರೀ ಲಕ್ಷ್ಮಣ್ ಇವರು ತರಬೇತಿಯನ್ನು ನೀಡಿದರು.

ಬೆಳ್ತಂಗಡಿ ತಾಲೂಕಿನ 48 ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಿಂದ 48 ಜನ ಮತ್ತು ಬಂಟ್ವಾಳ ತಾಲೂಕಿನ 6 ಜನ ಮುಖ್ಯ ಪುಸ್ತಕ ಬರಹಗಾರರು ತರಬೇತಿಯಲ್ಲಿ ಭಾಗವಹಿಸಿದರು.

ತರಬೇತಿಯ ದಿನಗಳಲ್ಲೂ ಉಜಿರೆ ಸಂಜೀವಿನಿ ಒಕ್ಕೂಟದ ಅಕ್ಕ ಕೆಫೆಯಿಂದ ಉಪಹಾರ ಮತ್ತು ಭೋಜನದ ವ್ಯವಸ್ಥೆಯನ್ನು ಮಾಡಲಾಯಿತು.

ತರಬೇತಿ ಕಾರ್ಯಕ್ರಮದಲ್ಲಿ ತಾಲೂಕು ವ್ಯವಸ್ಥಾಪಕರು, ವಲಯ ಮೇಲ್ವಿಚಾರಕರುಗಳು, ಬಿಆರ್ ಪಿ -ಪಿಆರ್ ಐ ಉಪಸ್ಥಿತರಿದ್ದು ತರಬೇತಿಯ ಯಶಸ್ಸಿಗೆ ಸಹಕರಿಸಿದರು.

Related posts

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ತುಂಬೆದಲೆಕ್ಕಿ ಶಿಲಾಮಯ ಭಜನ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವ-ಧಾರ್ಮಿಕ ಸಭೆ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya
error: Content is protected !!