September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

ಅಳದಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡಗಕಾರಂದೂರು ಗ್ರಾಮ ಎ ಒಕ್ಕೂಟದ ತ್ರೈಮಾಸಿಕ ಸಭೆಯು ಹರೀಶ್ ಸಾಲಿಯನ್ ನಿನ್ನಿಕಲ್ಲು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯೋಜನೆಯ ಜಿಲ್ಲಾ ವಿಮಾ ಸಮನ್ವಯ ಅಧಿಕಾರಿ ಶ್ರೀಮತಿ ಹೇಮಲತಾ ಹೆಗ್ಡೆ ಇವರು ಪಿ ಆರ್ ಕೆ ಮತ್ತು ಸಂಪೂರ್ಣ ಸುರಕ್ಷಾದ ಬಗ್ಗೆ ಜನರಿಗೆ ಮನಮುಟ್ಟುವ ಹಾಗೆ ಮಾಹಿತಿ ನೀಡಿದರು. ಜನರ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದರು.

ನಂತರ ಪ್ರಾಥಮಿಕ ಆರೋಗ್ಯ ಕೇಂದ್ರ ಅಳೆದಂಗಡಿಯ ಜಿಲ್ಲಾ ಸುರಕ್ಷಾಧಿಕಾರಿ ಶ್ರೀಮತಿ ತೃಪ್ತಿ ಆಚಾರ್ಯ ಇವರು ಆರೋಗ್ಯದಲ್ಲಿ ಆಗುವ ಏರುಪೇರುಗಳ ಬಗ್ಗೆ ಯಾವ ರೀತಿ ಜಾಗೃತರಾಗಿರಬೇಕು ಎಂಬ ಮಾಹಿತಿಯನ್ನು ನೀಡಿದರು. ಬಿಪಿ ಶುಗರ್ ತಪಾಸಣೆಯನ್ನು ಮಾಡಿದರು. ಆಶಾ ಕಾರ್ಯಕರ್ತೆ ಶ್ರೀಮತಿ ಶಾರದಾ ಶೆಟ್ಟಿ ಸಹಕಾರ ನೀಡಿದರು.

ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧ ಎಂ ಮಾತನಾಡಿ ಸಂಘದ ನಿರ್ವಹಣೆ ಭಾಗವಹಿಸುವಿಕೆ. ಯೋಜನೆಗೆ ಸಂಬಂಧಪಟ್ಟ ಎಲ್ಲಾ ವಿಚಾರಗಳನ್ನು ತಿಳಿಸಿದರು. ಜನನಿ ತಂಡದಿಂದ ಸಲಹಾ ಪೆಟ್ಟಿಗೆಯನ್ನು ಒಕ್ಕೂಟಕ್ಕೆ ಹಸ್ತಾಂತರಿಸಿದರು. ವೇದಿಕೆಯಲ್ಲಿ ಸೇವಾ ಪ್ರತಿನಿಧಿ ಶ್ರೀಮತಿ ಶುಭ ಹರೀಶ್ ರೈ, ಪದಾಧಿಕಾರಿಗಳು ಉಪಸ್ಥಿತರಿದ್ದರು. ಜಗನ್ನಾಥ್ ಕುಲಾಲ್ ಸ್ವಾಗತಿಸಿ, , ಮನೋಹರ್ ಪ್ರಸಾದ್ ನಿರೂಪಿಸಿ, ಧನ್ಯವಾದವಿತ್ತರು.

Related posts

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಭಾರತೀಯ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡಕ್ಕೆ ಎಸ್‌.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಎಚ್. ಆಯ್ಕೆ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಅತ್ಯುತ್ತಮ ಸೇವೆಗೆ ಹೆಸರುವಾಸಿ ಗುರುವಾಯನಕೆರೆಯ ಹೋಟೆಲ್ ರೇಸ್ ಇನ್

Suddi Udaya
error: Content is protected !!