23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

ಅಳದಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡಗಕಾರಂದೂರು ಗ್ರಾಮ ಎ ಒಕ್ಕೂಟದ ತ್ರೈಮಾಸಿಕ ಸಭೆಯು ಹರೀಶ್ ಸಾಲಿಯನ್ ನಿನ್ನಿಕಲ್ಲು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯೋಜನೆಯ ಜಿಲ್ಲಾ ವಿಮಾ ಸಮನ್ವಯ ಅಧಿಕಾರಿ ಶ್ರೀಮತಿ ಹೇಮಲತಾ ಹೆಗ್ಡೆ ಇವರು ಪಿ ಆರ್ ಕೆ ಮತ್ತು ಸಂಪೂರ್ಣ ಸುರಕ್ಷಾದ ಬಗ್ಗೆ ಜನರಿಗೆ ಮನಮುಟ್ಟುವ ಹಾಗೆ ಮಾಹಿತಿ ನೀಡಿದರು. ಜನರ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದರು.

ನಂತರ ಪ್ರಾಥಮಿಕ ಆರೋಗ್ಯ ಕೇಂದ್ರ ಅಳೆದಂಗಡಿಯ ಜಿಲ್ಲಾ ಸುರಕ್ಷಾಧಿಕಾರಿ ಶ್ರೀಮತಿ ತೃಪ್ತಿ ಆಚಾರ್ಯ ಇವರು ಆರೋಗ್ಯದಲ್ಲಿ ಆಗುವ ಏರುಪೇರುಗಳ ಬಗ್ಗೆ ಯಾವ ರೀತಿ ಜಾಗೃತರಾಗಿರಬೇಕು ಎಂಬ ಮಾಹಿತಿಯನ್ನು ನೀಡಿದರು. ಬಿಪಿ ಶುಗರ್ ತಪಾಸಣೆಯನ್ನು ಮಾಡಿದರು. ಆಶಾ ಕಾರ್ಯಕರ್ತೆ ಶ್ರೀಮತಿ ಶಾರದಾ ಶೆಟ್ಟಿ ಸಹಕಾರ ನೀಡಿದರು.

ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧ ಎಂ ಮಾತನಾಡಿ ಸಂಘದ ನಿರ್ವಹಣೆ ಭಾಗವಹಿಸುವಿಕೆ. ಯೋಜನೆಗೆ ಸಂಬಂಧಪಟ್ಟ ಎಲ್ಲಾ ವಿಚಾರಗಳನ್ನು ತಿಳಿಸಿದರು. ಜನನಿ ತಂಡದಿಂದ ಸಲಹಾ ಪೆಟ್ಟಿಗೆಯನ್ನು ಒಕ್ಕೂಟಕ್ಕೆ ಹಸ್ತಾಂತರಿಸಿದರು. ವೇದಿಕೆಯಲ್ಲಿ ಸೇವಾ ಪ್ರತಿನಿಧಿ ಶ್ರೀಮತಿ ಶುಭ ಹರೀಶ್ ರೈ, ಪದಾಧಿಕಾರಿಗಳು ಉಪಸ್ಥಿತರಿದ್ದರು. ಜಗನ್ನಾಥ್ ಕುಲಾಲ್ ಸ್ವಾಗತಿಸಿ, , ಮನೋಹರ್ ಪ್ರಸಾದ್ ನಿರೂಪಿಸಿ, ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya
error: Content is protected !!