23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

ಅಳದಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡಗಕಾರಂದೂರು ಗ್ರಾಮ ಎ ಒಕ್ಕೂಟದ ತ್ರೈಮಾಸಿಕ ಸಭೆಯು ಹರೀಶ್ ಸಾಲಿಯನ್ ನಿನ್ನಿಕಲ್ಲು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯೋಜನೆಯ ಜಿಲ್ಲಾ ವಿಮಾ ಸಮನ್ವಯ ಅಧಿಕಾರಿ ಶ್ರೀಮತಿ ಹೇಮಲತಾ ಹೆಗ್ಡೆ ಇವರು ಪಿ ಆರ್ ಕೆ ಮತ್ತು ಸಂಪೂರ್ಣ ಸುರಕ್ಷಾದ ಬಗ್ಗೆ ಜನರಿಗೆ ಮನಮುಟ್ಟುವ ಹಾಗೆ ಮಾಹಿತಿ ನೀಡಿದರು. ಜನರ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದರು.

ನಂತರ ಪ್ರಾಥಮಿಕ ಆರೋಗ್ಯ ಕೇಂದ್ರ ಅಳೆದಂಗಡಿಯ ಜಿಲ್ಲಾ ಸುರಕ್ಷಾಧಿಕಾರಿ ಶ್ರೀಮತಿ ತೃಪ್ತಿ ಆಚಾರ್ಯ ಇವರು ಆರೋಗ್ಯದಲ್ಲಿ ಆಗುವ ಏರುಪೇರುಗಳ ಬಗ್ಗೆ ಯಾವ ರೀತಿ ಜಾಗೃತರಾಗಿರಬೇಕು ಎಂಬ ಮಾಹಿತಿಯನ್ನು ನೀಡಿದರು. ಬಿಪಿ ಶುಗರ್ ತಪಾಸಣೆಯನ್ನು ಮಾಡಿದರು. ಆಶಾ ಕಾರ್ಯಕರ್ತೆ ಶ್ರೀಮತಿ ಶಾರದಾ ಶೆಟ್ಟಿ ಸಹಕಾರ ನೀಡಿದರು.

ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧ ಎಂ ಮಾತನಾಡಿ ಸಂಘದ ನಿರ್ವಹಣೆ ಭಾಗವಹಿಸುವಿಕೆ. ಯೋಜನೆಗೆ ಸಂಬಂಧಪಟ್ಟ ಎಲ್ಲಾ ವಿಚಾರಗಳನ್ನು ತಿಳಿಸಿದರು. ಜನನಿ ತಂಡದಿಂದ ಸಲಹಾ ಪೆಟ್ಟಿಗೆಯನ್ನು ಒಕ್ಕೂಟಕ್ಕೆ ಹಸ್ತಾಂತರಿಸಿದರು. ವೇದಿಕೆಯಲ್ಲಿ ಸೇವಾ ಪ್ರತಿನಿಧಿ ಶ್ರೀಮತಿ ಶುಭ ಹರೀಶ್ ರೈ, ಪದಾಧಿಕಾರಿಗಳು ಉಪಸ್ಥಿತರಿದ್ದರು. ಜಗನ್ನಾಥ್ ಕುಲಾಲ್ ಸ್ವಾಗತಿಸಿ, , ಮನೋಹರ್ ಪ್ರಸಾದ್ ನಿರೂಪಿಸಿ, ಧನ್ಯವಾದವಿತ್ತರು.

Related posts

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಉಜಿರೆ: ರಾಜಾರಾಮ್ ಭಟ್ ನಿಧನ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya
error: Content is protected !!