July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಹಿಂದಿ ದಿನಾಚರಣೆ

ಉಜಿರೆ : “ಭಾಷೆ ಭಾವನೆಗಳಿಗೆ ಮಾಧ್ಯಮ. ಪ್ರಸ್ತುತ ಅನೇಕ ಭಾಷೆಗಳನ್ನು ಕಲಿಯುವ ಅವಕಾಶಗಳಿವೆ ಬಳಸಿಕೊಳ್ಳಿ” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್.ಕೆ.ಡಿ.ಆರ್.ಡಿ.ಪಿ) ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿ.ಇ.ಒ) ಅನಿಲ್ ಕುಮಾರ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ನಡೆದ ‘ಹಿಂದಿ ದಿವಸ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನೃತ್ಯ, ಕಿರು ಪ್ರಹಸನ, ವೃಂದ ಗಾಯನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿಯರಾದ ಆತ್ಮೀಯ ಹಾಗೂ ಧೃತಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

Suddi Udaya

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!