23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘು ಉಜಿರೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಸೆ.21 ರಂದು ನಿಗದಿಯಾಗಿದ್ದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಿಗೆ ನಿರ್ದೇಶಕರುಗಳು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರಿ ಸಂಘ- ಸಂಸ್ಥೆಗಳು ಸ್ಥಾನದಿಂದ ಹಾಲಿ ಅಧ್ಯಕ್ಷ ಶ್ರೀಧರ ಜಿ. ಭಿಡೆ, ಸಾಮಾನ್ಯ ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಹಾಲಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಹಿಂದುಳಿದ ವರ್ಗ ಎ ಮೀಸಲು ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಸೋಮನಾಥ ಬಂಗೇರ ವರ್ಪಾಳೆ ಅಳದಂಗಡಿ, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನ ಕೊಕ್ಕಡ ಫಿರ್ಕಾದಿಂದ ಹೆಚ್. ಪದ್ಮಗೌಡ ಬೆಳಾಲು , ಗ್ರೇಸಿಯನ್ ವೇಗಸ್ ಕನ್ಯಾಡಿ-|| ಕಲ್ಮಂಜ, ಮತ್ತು ಬಾಲಕೃಷ್ಣ ಗೌಡ ಕೇರಿಮಾರ್, ಸಾಮಾನ್ಯ ಸ್ಥಾನ ವೇಣೂರು ಫಿರ್ಕಾದಿಂದ ಡಾ. ಶಶಿಧರ ಡೋಂಗ್ರೆ ಶೇಣೆರೆಬೈಲ್ ಅಳದಂಗಡಿ, ಸಾಮಾನ್ಯ ಸ್ಥಾನ ಕೊಕ್ಕಡ ಫಿರ್ಕಾದಿಂದ ಶಾಜಿ ಪಿ.ಎ ಶಿಬಾಜೆ, ಕೆ.ಜೆ ಆಗಸ್ಟೀನ್ ಪೆರ್ಮಾಣು ನಡ, ಭರತ್ ಕುಮಾರ್ ಹೆಚ್. ಇಂದಬೆಟ್ಟು ಬಂಗಾಡಿ, ತಿಮ್ಮಪ್ಪ ಗೌಡ ಪಿ. ಬನ್ನಂದೂರು ಬೆಳಾಲು, ಮಹಿಳಾ ಮೀಸಲು ಸ್ಥಾನದಿಂದ ಸುಭಾಷಿಣಿ ಆರ್. ಮಠದಬೈಲು ಬೆಳ್ತಂಗಡಿ, ಜಯಶ್ರೀ ಡಿ.ಎಂ. ಉಜಿರೆ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಬೈರಪ್ಪ ಕಲ್ಲಗುಡ್ಡೆ ಕಳೆಂಜ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಕೆ. ರಾಮನಾಯ್ಕ ಕಾಯರ್ತಡ್ಕ ಕಳೆಂಜ ಇವರು ಆವಿರೋಧವಾಗಿ ಆಯ್ಕೆಯಾದವರು.


ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ಪುತ್ತೂರು ಉಪ ಸಹಾಯಕ ನಿಬಂಧಕರಾದ ಎಂ. ರಘು ಕಾರ್ಯನಿರ್ವಹಿಸಿದ್ದರು. ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘುದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ ಸಹಕರಿಸಿದರು.

Related posts

ಅಳದಂಗಡಿ ಸಂತ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ ರೂ.1.50ಲಕ್ಷ ಸಹಾಯಧನ

Suddi Udaya

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya
error: Content is protected !!