22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘು ಉಜಿರೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಸೆ.21 ರಂದು ನಿಗದಿಯಾಗಿದ್ದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಿಗೆ ನಿರ್ದೇಶಕರುಗಳು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರಿ ಸಂಘ- ಸಂಸ್ಥೆಗಳು ಸ್ಥಾನದಿಂದ ಹಾಲಿ ಅಧ್ಯಕ್ಷ ಶ್ರೀಧರ ಜಿ. ಭಿಡೆ, ಸಾಮಾನ್ಯ ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಹಾಲಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಹಿಂದುಳಿದ ವರ್ಗ ಎ ಮೀಸಲು ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಸೋಮನಾಥ ಬಂಗೇರ ವರ್ಪಾಳೆ ಅಳದಂಗಡಿ, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನ ಕೊಕ್ಕಡ ಫಿರ್ಕಾದಿಂದ ಹೆಚ್. ಪದ್ಮಗೌಡ ಬೆಳಾಲು , ಗ್ರೇಸಿಯನ್ ವೇಗಸ್ ಕನ್ಯಾಡಿ-|| ಕಲ್ಮಂಜ, ಮತ್ತು ಬಾಲಕೃಷ್ಣ ಗೌಡ ಕೇರಿಮಾರ್, ಸಾಮಾನ್ಯ ಸ್ಥಾನ ವೇಣೂರು ಫಿರ್ಕಾದಿಂದ ಡಾ. ಶಶಿಧರ ಡೋಂಗ್ರೆ ಶೇಣೆರೆಬೈಲ್ ಅಳದಂಗಡಿ, ಸಾಮಾನ್ಯ ಸ್ಥಾನ ಕೊಕ್ಕಡ ಫಿರ್ಕಾದಿಂದ ಶಾಜಿ ಪಿ.ಎ ಶಿಬಾಜೆ, ಕೆ.ಜೆ ಆಗಸ್ಟೀನ್ ಪೆರ್ಮಾಣು ನಡ, ಭರತ್ ಕುಮಾರ್ ಹೆಚ್. ಇಂದಬೆಟ್ಟು ಬಂಗಾಡಿ, ತಿಮ್ಮಪ್ಪ ಗೌಡ ಪಿ. ಬನ್ನಂದೂರು ಬೆಳಾಲು, ಮಹಿಳಾ ಮೀಸಲು ಸ್ಥಾನದಿಂದ ಸುಭಾಷಿಣಿ ಆರ್. ಮಠದಬೈಲು ಬೆಳ್ತಂಗಡಿ, ಜಯಶ್ರೀ ಡಿ.ಎಂ. ಉಜಿರೆ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಬೈರಪ್ಪ ಕಲ್ಲಗುಡ್ಡೆ ಕಳೆಂಜ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಕೆ. ರಾಮನಾಯ್ಕ ಕಾಯರ್ತಡ್ಕ ಕಳೆಂಜ ಇವರು ಆವಿರೋಧವಾಗಿ ಆಯ್ಕೆಯಾದವರು.


ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ಪುತ್ತೂರು ಉಪ ಸಹಾಯಕ ನಿಬಂಧಕರಾದ ಎಂ. ರಘು ಕಾರ್ಯನಿರ್ವಹಿಸಿದ್ದರು. ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘುದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ ಸಹಕರಿಸಿದರು.

Related posts

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya
error: Content is protected !!