23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

ವೇಣೂರು: ಪಡ್ಡoದಡ್ಕದ ಕೇಂದ್ರ ಮಸೀದಿಯಲ್ಲಿ ವಿವಿಧ ಮೂಲಭೂತ ಸೌವಲತ್ತುಗಳನ್ನು ಸೆ.12 ರಂದು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಯವರ ಅಧ್ಯಕ್ಷತೆಯಲ್ಲಿ ಲೋಕಾರ್ಪಣೆ ಮಾಡಲಾಯಿತು.

ಸುಸಜ್ಜಿತವಾದ ನವೀಕೃತ ಹೌಲ್ (ವಝು ಖಾನ)ನ್ನು ತ್ವಯಿಬಾ ಎಜುಕೇಷನಲ್ ಸೆಂಟರ್ ( ಪಟ್ಟಾಡಿ ) ಮೂಡಬಿದ್ರಿ ಚೇರ್ಮೆನ್ ಸಯ್ಯದ್ ಅಬ್ದುಲ್ ರಹಿಮಾನ್ ಸಾದಾತ್ ತಂಗಳ್ ಬಾಲರವಿ ನೆರವೇರಿಸಿದರು .ನವೀಕೃತ ಮದರಸವನ್ನು ಪ್ರಿನ್ಸಿಪಾಲ್ ದಾರುಸ್ಸಲಾಮ್ ದಾವ ಕಾಲೇಜು ಬೆಳ್ತಂಗಡಿಯ ತ್ವಾಹ ತಂಗಳ್ ನೆರವೇರಿಸಿದರು. ಮಸೀದಿ ಕಚೇರಿಯನ್ನು ಮುಂಬೈನ( ಎಂಪೈರ್ ವಿಸ್ತ ಇನ್ಫ್ರಾ )ಉದ್ಯಮಿ ಮೊಹಮ್ಮದ್ ಮುಸ್ತಫಾ ನೆರವೇರಿಸಿದರು. ಮಸೀದಿ ಖತೀಬ್ ಕಲಂದರ್ ಶಾಫಿ ಬಾಖವಿ ಖಾಮಿಲ್ ಅಲ್ ಮನ್ನಾನಿ ಕರಾಯ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅಥಿತಿಗಳಾಗಿ ಉದ್ಯಮಿ ಹಾಗೂ ಡಿಡಿ ಸಮೂಹ ಸಂಸ್ಥೆಗಳ ಚೇರ್ಮನ್ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಮಸೀದಿ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಯು.ಕೆ ಮೊಹಮ್ಮದ್ ಹಾಜಿ ,ಮೂಡಬಿದ್ರಿ ಅಲ್ ಮಫಾಝ ಕಾಲೇಜಿನ ಪ್ರಿನ್ಸಿಪಾಲ್ ಪಿಪಿ ಅಹ್ಮದ್ ಸಖಾಫಿ ,ಬೆಳ್ತಂಗಡಿ ಕೇಂದ್ರ ಲ್ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ,ಪತ್ರಕರ್ತ ಜನಾಬ್ ಎಚ್ ಮಹಮ್ಮದ್ ವೇಣೂರು ಶುಭ ಹಾರೈಸಿದರು. ಪ್ರಮುಖರಾದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ,ಕೋಶಾಧಿಕಾರಿ ಪಿಜೆ ಮಹಮೂದ್ ಲೆಕ್ಕ ಪರಿಶೋಧಕ ಇದ್ರೀಸ್ ಪುಲಾಬೆ, ಜೊತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವ ನಗರ, ಸದಸ್ಯರಾದ ಅಶ್ರಫ್ ಗಾಂಧಿ ನಗರ ,ಅಶ್ರಫ್ ಕಿರೋಡಿ ,ಯುಕೆ ಇರ್ಫಾನ್ ಪೆರಿಂಜೆ & ಶಾಂತಿ ನಗರ ಮದರಸ ಅಧ್ಯಕ್ಷ ಅಶ್ರಫ್ ಉಪಸ್ಥಿತರಿದ್ದರು.


ಪ್ರಮುಖ ದಾನಿಗಳಾದ ಸಾರ ಇಬ್ರಾಹಿಂ ಟ್ರಸ್ಟ್ ನ ಪರವಾಗಿ ಅಕ್ಬರ್ ಪೆರಿಂಜೆ ,ಯುಕೆ ಮೊಹಮ್ಮದ್ ಹಾಜಿ ಹಾಗು ಮೊಹಮ್ಮದ್ ಮುಸ್ತಫಾ ರವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಮೊಹಮ್ಮದ್ ಶಾಫಿ ಸ್ವಾಗತಿಸಿದರು. ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ ವಂದಿಸಿದರು.

Related posts

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya
error: Content is protected !!